ರಾಜ್ಯ

ಸೆಪ್ಟೆಂಬರ್.‌1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದರಿಂದ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರಬರಲು ಅನುಕೂಲವಾಗುವಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಮೇಲ್ನೋಟಕ್ಕೆ ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿರುವುದು ಕಂಡುಬರುತ್ತದೆ. ಎಸ್‍ಐಟಿ ಸರ್ಕಾರದಡಿಯೇ ಕಾರ್ಯ ನಿರ್ವಹಿಸುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಪ್ರಕರಣದ ಸೂತ್ರಧಾರಿಗಳನ್ನು ಬಂಧಿಸದಂತೆ ಒತ್ತಡ ಹೇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಎನ್‍ಐಎಗೆ ವಹಿಸಬೇಕೆಂದು ಆಗ್ರಹ ಮಾಡಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಸೂಕ್ತ ತನಿಖೆಗೆ ಒತ್ತಾಯಿಸಿ ಸೆಪ್ಟೆಂಬರ್ 01 ರಂದು ಸೋಮವಾರ ಧರ್ಮಸ್ಥಳ ಚಲೋ ನಡೆಸಲಿದೆ. ಷಢ್ಯಂತ್ರ ತನಿಖೆಯನ್ನು ಎನ್‍ಐಎಗೆ ವಹಿಸುವಂತೆ ಆಗ್ರಹಿಸಿ ಧರ್ಮಸ್ಥಳ ಚಲೋ ಇದಾಗಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಧರ್ಮಸ್ಥಳ ಚಲೋದಲ್ಲಿ ಭಾಗವಹಿಸ್ತಾರೆ. ಎಲ್ಲ ಕ್ಷೇತ್ರಗಳಿಂದಲೂ ಭಕ್ತರು, ಹಿಂದೂಗಳಿಂದ ಧರ್ಮಸ್ಥಳಕ್ಕೆ ಚಲೋ ನಡೆಯಲಿದೆ. ಅಂದು ಬೆಳಗ್ಗೆ ಅವರವರ ಊರುಗಳಲ್ಲಿ ಪೂಜೆ ಮಾಡಿಕೊಂಡು ಧರ್ಮಸ್ಥಳ ಹೊರಡಬೇಕು. ಮಧ್ಯಾಹ್ನ ಧರ್ಮಸ್ಥಳದಲ್ಲಿ ಧರ್ಮಜಾಗೃತಿ ಇರಲಿದೆ ಎಂದು ಹೇಳಿದರು.

ಧರ್ನಸ್ಥಳ ಭಕ್ತರು, ಹಿಂದೂಗಳು, ಹಿಂದೂ ಸಮಾಜದ ಪರವಾಗಿ ಸಿಎಂಗೆ ಮನವಿ ಮಾಡುವುದು ಏನೆಂದರೆ, ಸರ್ಕಾರಕ್ಕೆ ಕಳಂಕ ಅಂಟಿದೆ, ಈ ಕಳಂಕದಿಂದ ಹೊರಗೆ ಬರಬೇಕಿದೆ. ದುಷ್ಕೃತ್ಯದ ಹಿಂದೆ ಯಾರಿದ್ದಾರೆ ಎಂದು ಸರಿಯಾದ ರೀತಿಯಲ್ಲಿ ತನಿಖೆ ನಡೆಯಬೇಕಿದೆ.

ಕೆಲ ದುಷ್ಟ ಶಕ್ತಿಗಳು ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಪ್ರರಕಣದ ನಂತರ ಬೇರೆ ದೇವಸ್ಥಾನಗಳ ಮೇಲೂ ಅಪಪ್ರಚಾರ ಆಗಬಹುದು. ಇದರ ತನಿಖೆ ಸರಿಯಾಗಿ ಆಗಬೇಕು. ಸರ್ಕಾರ ನಿಷ್ಪಕ್ಷಪಾತ ತನಿಖೆಗೆ ಎನ್‍ಐಎಗೆ ವಹಿಸಬೇಕು ಎಂದು ಹೇಳಿದರು.

ಧರ್ಮಸ್ಥಳ ವಿರುದ್ಧ ಷಢ್ಯಂತ್ರದ ತನಿಖೆ ನಡೆಸಿದಾಗ ಮಾತ್ರ ಭಕ್ತರಲ್ಲೂ ವಿಶ್ವಾಸ ಮೂಡುತ್ತದೆ. ಈ ಪ್ರಕರಣದ ಬಗ್ಗೆ ಮೊದಲು ಎಸ್‍ಐಟಿ ಮಾಡುವುದಿಲ್ಲ ಎಂದು ಹೇಳಿದ ಮಾರನೇಯ ದಿನ ಘೋಷಣೆ ಮಾಡಿದರು. ರಾತ್ರೋರಾತ್ರಿ ಸಿಎಂ ನಿಲುವು ಬದಲಾಯಿತು, ಯಾರ ಒತ್ತಡ ಇತ್ತು? ಧರ್ಮಸ್ಥಳ ಬಗ್ಗೆ ಪರಾಮರ್ಶೆ ಮಾಡದೇ ರಾತ್ರೋರಾತ್ರಿ ತಮ್ಮ ನಿರ್ಧಾರ ಬದಲಾಯಿಸಿಕೊಂಡರು? ಇದೆಲ್ಲವೂ ಬಹಿರಂಗ ಆಗಬೇಕಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

6 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

36 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago