ರಾಜ್ಯ

ಸೆಪ್ಟೆಂಬರ್.‌1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದರಿಂದ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರಬರಲು ಅನುಕೂಲವಾಗುವಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಮೇಲ್ನೋಟಕ್ಕೆ ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿರುವುದು ಕಂಡುಬರುತ್ತದೆ. ಎಸ್‍ಐಟಿ ಸರ್ಕಾರದಡಿಯೇ ಕಾರ್ಯ ನಿರ್ವಹಿಸುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಪ್ರಕರಣದ ಸೂತ್ರಧಾರಿಗಳನ್ನು ಬಂಧಿಸದಂತೆ ಒತ್ತಡ ಹೇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಎನ್‍ಐಎಗೆ ವಹಿಸಬೇಕೆಂದು ಆಗ್ರಹ ಮಾಡಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಸೂಕ್ತ ತನಿಖೆಗೆ ಒತ್ತಾಯಿಸಿ ಸೆಪ್ಟೆಂಬರ್ 01 ರಂದು ಸೋಮವಾರ ಧರ್ಮಸ್ಥಳ ಚಲೋ ನಡೆಸಲಿದೆ. ಷಢ್ಯಂತ್ರ ತನಿಖೆಯನ್ನು ಎನ್‍ಐಎಗೆ ವಹಿಸುವಂತೆ ಆಗ್ರಹಿಸಿ ಧರ್ಮಸ್ಥಳ ಚಲೋ ಇದಾಗಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಧರ್ಮಸ್ಥಳ ಚಲೋದಲ್ಲಿ ಭಾಗವಹಿಸ್ತಾರೆ. ಎಲ್ಲ ಕ್ಷೇತ್ರಗಳಿಂದಲೂ ಭಕ್ತರು, ಹಿಂದೂಗಳಿಂದ ಧರ್ಮಸ್ಥಳಕ್ಕೆ ಚಲೋ ನಡೆಯಲಿದೆ. ಅಂದು ಬೆಳಗ್ಗೆ ಅವರವರ ಊರುಗಳಲ್ಲಿ ಪೂಜೆ ಮಾಡಿಕೊಂಡು ಧರ್ಮಸ್ಥಳ ಹೊರಡಬೇಕು. ಮಧ್ಯಾಹ್ನ ಧರ್ಮಸ್ಥಳದಲ್ಲಿ ಧರ್ಮಜಾಗೃತಿ ಇರಲಿದೆ ಎಂದು ಹೇಳಿದರು.

ಧರ್ನಸ್ಥಳ ಭಕ್ತರು, ಹಿಂದೂಗಳು, ಹಿಂದೂ ಸಮಾಜದ ಪರವಾಗಿ ಸಿಎಂಗೆ ಮನವಿ ಮಾಡುವುದು ಏನೆಂದರೆ, ಸರ್ಕಾರಕ್ಕೆ ಕಳಂಕ ಅಂಟಿದೆ, ಈ ಕಳಂಕದಿಂದ ಹೊರಗೆ ಬರಬೇಕಿದೆ. ದುಷ್ಕೃತ್ಯದ ಹಿಂದೆ ಯಾರಿದ್ದಾರೆ ಎಂದು ಸರಿಯಾದ ರೀತಿಯಲ್ಲಿ ತನಿಖೆ ನಡೆಯಬೇಕಿದೆ.

ಕೆಲ ದುಷ್ಟ ಶಕ್ತಿಗಳು ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಪ್ರರಕಣದ ನಂತರ ಬೇರೆ ದೇವಸ್ಥಾನಗಳ ಮೇಲೂ ಅಪಪ್ರಚಾರ ಆಗಬಹುದು. ಇದರ ತನಿಖೆ ಸರಿಯಾಗಿ ಆಗಬೇಕು. ಸರ್ಕಾರ ನಿಷ್ಪಕ್ಷಪಾತ ತನಿಖೆಗೆ ಎನ್‍ಐಎಗೆ ವಹಿಸಬೇಕು ಎಂದು ಹೇಳಿದರು.

ಧರ್ಮಸ್ಥಳ ವಿರುದ್ಧ ಷಢ್ಯಂತ್ರದ ತನಿಖೆ ನಡೆಸಿದಾಗ ಮಾತ್ರ ಭಕ್ತರಲ್ಲೂ ವಿಶ್ವಾಸ ಮೂಡುತ್ತದೆ. ಈ ಪ್ರಕರಣದ ಬಗ್ಗೆ ಮೊದಲು ಎಸ್‍ಐಟಿ ಮಾಡುವುದಿಲ್ಲ ಎಂದು ಹೇಳಿದ ಮಾರನೇಯ ದಿನ ಘೋಷಣೆ ಮಾಡಿದರು. ರಾತ್ರೋರಾತ್ರಿ ಸಿಎಂ ನಿಲುವು ಬದಲಾಯಿತು, ಯಾರ ಒತ್ತಡ ಇತ್ತು? ಧರ್ಮಸ್ಥಳ ಬಗ್ಗೆ ಪರಾಮರ್ಶೆ ಮಾಡದೇ ರಾತ್ರೋರಾತ್ರಿ ತಮ್ಮ ನಿರ್ಧಾರ ಬದಲಾಯಿಸಿಕೊಂಡರು? ಇದೆಲ್ಲವೂ ಬಹಿರಂಗ ಆಗಬೇಕಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago