ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದರಿಂದ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರಬರಲು ಅನುಕೂಲವಾಗುವಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ವಹಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಮೇಲ್ನೋಟಕ್ಕೆ ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿರುವುದು ಕಂಡುಬರುತ್ತದೆ. ಎಸ್ಐಟಿ ಸರ್ಕಾರದಡಿಯೇ ಕಾರ್ಯ ನಿರ್ವಹಿಸುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಪ್ರಕರಣದ ಸೂತ್ರಧಾರಿಗಳನ್ನು ಬಂಧಿಸದಂತೆ ಒತ್ತಡ ಹೇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಎನ್ಐಎಗೆ ವಹಿಸಬೇಕೆಂದು ಆಗ್ರಹ ಮಾಡಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಸೂಕ್ತ ತನಿಖೆಗೆ ಒತ್ತಾಯಿಸಿ ಸೆಪ್ಟೆಂಬರ್ 01 ರಂದು ಸೋಮವಾರ ಧರ್ಮಸ್ಥಳ ಚಲೋ ನಡೆಸಲಿದೆ. ಷಢ್ಯಂತ್ರ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿ ಧರ್ಮಸ್ಥಳ ಚಲೋ ಇದಾಗಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಧರ್ಮಸ್ಥಳ ಚಲೋದಲ್ಲಿ ಭಾಗವಹಿಸ್ತಾರೆ. ಎಲ್ಲ ಕ್ಷೇತ್ರಗಳಿಂದಲೂ ಭಕ್ತರು, ಹಿಂದೂಗಳಿಂದ ಧರ್ಮಸ್ಥಳಕ್ಕೆ ಚಲೋ ನಡೆಯಲಿದೆ. ಅಂದು ಬೆಳಗ್ಗೆ ಅವರವರ ಊರುಗಳಲ್ಲಿ ಪೂಜೆ ಮಾಡಿಕೊಂಡು ಧರ್ಮಸ್ಥಳ ಹೊರಡಬೇಕು. ಮಧ್ಯಾಹ್ನ ಧರ್ಮಸ್ಥಳದಲ್ಲಿ ಧರ್ಮಜಾಗೃತಿ ಇರಲಿದೆ ಎಂದು ಹೇಳಿದರು.
ಧರ್ನಸ್ಥಳ ಭಕ್ತರು, ಹಿಂದೂಗಳು, ಹಿಂದೂ ಸಮಾಜದ ಪರವಾಗಿ ಸಿಎಂಗೆ ಮನವಿ ಮಾಡುವುದು ಏನೆಂದರೆ, ಸರ್ಕಾರಕ್ಕೆ ಕಳಂಕ ಅಂಟಿದೆ, ಈ ಕಳಂಕದಿಂದ ಹೊರಗೆ ಬರಬೇಕಿದೆ. ದುಷ್ಕೃತ್ಯದ ಹಿಂದೆ ಯಾರಿದ್ದಾರೆ ಎಂದು ಸರಿಯಾದ ರೀತಿಯಲ್ಲಿ ತನಿಖೆ ನಡೆಯಬೇಕಿದೆ.
ಕೆಲ ದುಷ್ಟ ಶಕ್ತಿಗಳು ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಪ್ರರಕಣದ ನಂತರ ಬೇರೆ ದೇವಸ್ಥಾನಗಳ ಮೇಲೂ ಅಪಪ್ರಚಾರ ಆಗಬಹುದು. ಇದರ ತನಿಖೆ ಸರಿಯಾಗಿ ಆಗಬೇಕು. ಸರ್ಕಾರ ನಿಷ್ಪಕ್ಷಪಾತ ತನಿಖೆಗೆ ಎನ್ಐಎಗೆ ವಹಿಸಬೇಕು ಎಂದು ಹೇಳಿದರು.
ಧರ್ಮಸ್ಥಳ ವಿರುದ್ಧ ಷಢ್ಯಂತ್ರದ ತನಿಖೆ ನಡೆಸಿದಾಗ ಮಾತ್ರ ಭಕ್ತರಲ್ಲೂ ವಿಶ್ವಾಸ ಮೂಡುತ್ತದೆ. ಈ ಪ್ರಕರಣದ ಬಗ್ಗೆ ಮೊದಲು ಎಸ್ಐಟಿ ಮಾಡುವುದಿಲ್ಲ ಎಂದು ಹೇಳಿದ ಮಾರನೇಯ ದಿನ ಘೋಷಣೆ ಮಾಡಿದರು. ರಾತ್ರೋರಾತ್ರಿ ಸಿಎಂ ನಿಲುವು ಬದಲಾಯಿತು, ಯಾರ ಒತ್ತಡ ಇತ್ತು? ಧರ್ಮಸ್ಥಳ ಬಗ್ಗೆ ಪರಾಮರ್ಶೆ ಮಾಡದೇ ರಾತ್ರೋರಾತ್ರಿ ತಮ್ಮ ನಿರ್ಧಾರ ಬದಲಾಯಿಸಿಕೊಂಡರು? ಇದೆಲ್ಲವೂ ಬಹಿರಂಗ ಆಗಬೇಕಾಗುತ್ತದೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…