ರಾಜ್ಯ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ಸೋಮವಾರ ಧರ್ಮಸ್ಥಳ ಚಲೋ ಅಭಿಯಾನವನ್ನು ನಡೆಸಲಿದೆ.

ಮೇಲ್ನೋಟಕ್ಕೆ ಈ ಪ್ರಕರಣವು ವ್ಯವಸ್ಥಿತ ಷಡ್ಯಂತ್ರ ಎಂದು ಕಂಡುಬಂದಿರುವುದರಿಂದ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ಧರ್ಮಸ್ಥಳ ಚಲೋ ಅಭಿಯಾನವನ್ನು ಹಮ್ಮಿಕೊಂಡಿವೆ.

ಧರ್ಮಸ್ಥಳದ ಸಮೀಪವಿರುವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರಮುಖರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಪ್ರಹ್ಲಾದ್‌ ಜೋಷಿ, ಶೋಭಾ ಕರಂದ್ಲಾಜೆ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಶಾಸಕರಾದ ಅಶ್ವತ್ಥನಾರಾಯಣ, ಎಸ್‌.ಆರ್‌.ವಿಶ್ವನಾಥ್‌, ಹರೀಶ್‌ ಪೂಂಜಾ, ಸಂಸದರು, ವಿಧಾನಪರಿಷತ್‌ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಹಿಂದೂಪರ ಕಾರ್ಯಕರ್ತರು ಸೇರಿದಂತೆ ಸುಮಾರು 1 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಲಿದ್ದಾರೆ.

ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಈ ಅಭಿಯಾನವನ್ನು ನಡೆಸಲಾಗುತ್ತದೆ.
ಅಭಿಯಾನವನ್ನು ಯಶಸ್ವಿಯಾಗಿ ನಡೆಸಲು ಬಿಜೆಪಿಯು ಸಂಚಾಲಕರನ್ನು ನೇಮಿಸಿದೆ. ಕಾರ್ಯಕ್ರಮಕ್ಕೆ ಬರುವ ಸ್ವಯಂಸೇವಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

13 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

13 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

18 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago