ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಸಕಾಲದಲ್ಲಿ ಗೊಬ್ಬರ ವಿತರಿಸದೆ ಸಂಕಷ್ಟ ಸೃಷ್ಟಿ ಮಾಡಿರುವ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರು ಹೊರತುಪಡಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಧುಮುಕಲಿದೆ.
ಬೆಂಗಳೂರು ಹೊರತುಪಡಿಸಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ರಸಗೊಬ್ಬರವನ್ನು ಪೂರೈಕೆ ಮಾಡದೆ ಅಭಾವ ಸೃಷ್ಟಿಸಿರುವ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಿದ್ದೇವೆ. ಬಿಜೆಪಿಯ ರೈತ ಮೋರ್ಚಾದಿಂದ ಎರಡು ಹಂತಗಳಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಸಗೊಬ್ಬರ ಕಳ್ಳ ದಂಧೆ ನಡೆಯುತ್ತಿದೆ. ರಸಗೊಬ್ಬರ ಅಭಾವ, ನಕಲಿ ಕೃಷಿ ಬೀಜಗಳಿಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.
ನಕಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ, ಯಾರು ಕಳ್ಳಸಾಗಣೆ ಮಾಡುತ್ತಿದ್ದಾರೆ? ಇದನ್ನು ಪತ್ತೆ ಹಚ್ಚಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ರಸಗೊಬ್ಬರ ಕಳ್ಳದಂಧೆಗೆ ಬ್ರೋಕರ್ಗಳು ಕಾರಣ. ಇವರಿಗೆ ಸಹಕಾರ ಕೊಡುವ ಕೆಲಸ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಕಾಳಜಿಯೂ ಇಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ದಾಸ್ತಾನು ಇಡುತ್ತಿದ್ದರು. ಅದಕ್ಕೆ ಅನುದಾನವೂ ಕೊಟ್ಟಿದ್ದರು. ಆದರೆ ಈ ಸರ್ಕಾರ ದಾಸ್ತಾನು ಅನುದಾನಕ್ಕೂ ಕಡಿತ ಮಾಡಿದೆ. ಸಾವಿರ ಕೋಟಿ ಇದ್ದ ದಾಸ್ತಾನು ಅನುದಾನವನ್ನು 400 ಕೋಟಿಗೆ ಇಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…