ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಸಕಾಲದಲ್ಲಿ ಗೊಬ್ಬರ ವಿತರಿಸದೆ ಸಂಕಷ್ಟ ಸೃಷ್ಟಿ ಮಾಡಿರುವ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರು ಹೊರತುಪಡಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಧುಮುಕಲಿದೆ.

ಬೆಂಗಳೂರು ಹೊರತುಪಡಿಸಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ರಸಗೊಬ್ಬರವನ್ನು ಪೂರೈಕೆ ಮಾಡದೆ ಅಭಾವ ಸೃಷ್ಟಿಸಿರುವ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಿದ್ದೇವೆ. ಬಿಜೆಪಿಯ ರೈತ ಮೋರ್ಚಾದಿಂದ ಎರಡು ಹಂತಗಳಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಸಗೊಬ್ಬರ ಕಳ್ಳ ದಂಧೆ ನಡೆಯುತ್ತಿದೆ. ರಸಗೊಬ್ಬರ ಅಭಾವ, ನಕಲಿ ಕೃಷಿ ಬೀಜಗಳಿಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿದರು.

ನಕಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ, ಯಾರು ಕಳ್ಳಸಾಗಣೆ ಮಾಡುತ್ತಿದ್ದಾರೆ? ಇದನ್ನು ಪತ್ತೆ ಹಚ್ಚಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ರಸಗೊಬ್ಬರ ಕಳ್ಳದಂಧೆಗೆ ಬ್ರೋಕರ್‌ಗಳು ಕಾರಣ. ಇವರಿಗೆ ಸಹಕಾರ ಕೊಡುವ ಕೆಲಸ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಕಾಳಜಿಯೂ ಇಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ದಾಸ್ತಾನು ಇಡುತ್ತಿದ್ದರು. ಅದಕ್ಕೆ ಅನುದಾನವೂ ಕೊಟ್ಟಿದ್ದರು. ಆದರೆ ಈ ಸರ್ಕಾರ ದಾಸ್ತಾನು ಅನುದಾನಕ್ಕೂ ಕಡಿತ ಮಾಡಿದೆ. ಸಾವಿರ ಕೋಟಿ ಇದ್ದ ದಾಸ್ತಾನು ಅನುದಾನವನ್ನು 400 ಕೋಟಿಗೆ ಇಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago