ರಾಜ್ಯ

ಕಾಂಗ್ರೆಸ್‌ನ ನಟ್ಟು ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷರೇ ಫೀಲ್ಡಿಗೆ ಇಳಿದಿದ್ದಾರೆ: ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದ ನಟ್ಟು, ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ ಒಳಜಗಳಕ್ಕೆ ಕೊನೆಮೊದಲು ಎಂಬುದಿಲ್ಲ. ರಾಜ್ಯ ಕಾಂಗ್ರೆಸ್ಸಿನ ನಟ್ಟು ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷರೇ ಫೀಲ್ಡಿಗೆ ಇಳಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಹಲಾಲ್‌ ಬಜೆಟ್ ಕೊನೆಯದ್ದಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಪ್ರತಿಪಾದಿಸುತ್ತಿದ್ದರೆ, ಇನ್ನೂ 3 ಬಜೆಟ್‌ ಸಿದ್ದರಾಮಯ್ಯ ಅವರೇ ಮಂಡಿಸಲಿದ್ದಾರೆ ಎಂದು ಸಿದ್ದರಾಮಯ್ಯ ಬಣ ಹೇಳುವ ಮೂಲಕ ಎರಡೂವರೆ ವರ್ಷದ ಒಪ್ಪಂದವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಇದರಿಂದ ಎರಡೂ ಬಣಗಳಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ ಎಂದು ಟೀಕಿಸಿದೆ.

ಕಾಂಗ್ರೆಸ್ಸಿನ ಈ ಒಳಜಗಳದಿಂದ ರಾಜ್ಯದ ಆಡಳಿತ ಯಂತ್ರ ನಟ್ಟು ಬೋಲ್ಟುಗಳೂ ಕಳಚಿಕೊಂಡಿದೆ. ಅಭಿವೃದ್ಧಿ ಎನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಒಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಶೂನ್ಯ ಅಭಿವೃದ್ಧಿ, ಒಟ್ಟಿನಲ್ಲಿ ಕರ್ನಾಟಕವನ್ನು ಕಾಂಗ್ರೆಸ್‌ ಸರ್ಕಾರ ದಿವಾಳಿಗೊಳಿಸುತ್ತಿದೆ ಎಂದು ಆರೋಪಿಸಿದೆ.

ಅರ್ಚನ ಎಸ್‌ ಎಸ್

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

3 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

3 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

7 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

7 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

7 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

7 hours ago