ಬೆಂಗಳೂರು: ಡಿಕೆಶಿಯನ್ನು ನೇರವಾಗಿ ಎದುರಿಸಲು ಸಾಧ್ಯವಾಗದೇ ಹಿಂಬಾಗಿಲ ಮೂಲಕ ಹಣೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶ ಮನಸ್ಥಿತಿಯಿಂದ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ. ನೇರವಾಗಿ ರಾಜಕೀಯ ಮಾಡಬೇಕೆ ಹೊರತು ತೆರೆಮರೆಯಲ್ಲಿ ಅಲ್ಲ ಎಂದು ಟೀಕಿಸಿದರು.
ಡಿಕೆ ಶಿವಕುಮಾರ್ ಅವರ ಒಂದು ವೀಡಿಯೊ ತುಣುಕು ಇಟ್ಟುಕೊಂಡು ಬಿಜೆಪಿ ಅವರ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಮತ್ತೇ ಬೆತ್ತಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಎಂದಿಗೂ ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಸಂವಿಧಾನದ ಬಗ್ಗೆ ಬಿಜೆಪಿ ಹಾಗೂ ಸಂಘ ಪರಿವಾರದಿಂದ ಹೇಳಿಸಿಕೊಳ್ಳುವ ಸಂದರ್ಭ ಕಾಂಗ್ರೆಸ್ಗೆ ಬಂದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಅಧ್ಯಕ್ಷರ ಮಾಧ್ಯಮ ಮತ್ತು ರಾಜಕೀಯ ಕಾರ್ಯದರ್ಶಿ ದೀಪಕ್ ತಮ್ಮಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಇದ್ದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…