ರಾಜ್ಯ

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ: ಸಿಎಂ ಸಿದ್ದರಾಮಯ್ಯ ಆರೋಪ

  • ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ
  • ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭವಲ್ಲ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು, ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ

ಸಿದ್ದರಾಮಯ್ಯನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಸೇರಿ, ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಬಾಕಿ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಲು ರಾಜ್ಯಪಾಲರಿಗೆ ಒತ್ತಾಯ

ಮುಡಾ ಪ್ರಕರಣದಲ್ಲಿ ಸಿಎಂ ಅವರು ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಜಯೇಂದ್ರ ತಿಳಿಸಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ, ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜ್ಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ ಎಂದು ತಿಳಿಸಿದರು.

ಪರಿಸರ ತೀರುವಳಿ ಬಂದ ತಕ್ಷಣ ಮಹಾದಾಯಿಗೆ ಚಾಲನೆ

ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದವಿದೆ.ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

16 ನೇ ಹಣಕಾಸು ಆಯೋಗ ರಾಜ್ಯದ ಅನುದಾನ ಕೊರತೆ ನೀಗಿಸುವ ವಿಶ್ವಾಸ

ನಿನ್ನೆ 16 ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ತೆರಿಗೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು , 1.66 ರಷ್ಟು ಪ್ರಮಾಣ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರ್ಉ 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16 ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ನಟ ದರ್ಶನ್ ಪ್ರಕರಣ: ತಪ್ಪೆಸೆಗಿರುವ ಅಧಿಕಾರಿಗಳ ಅಮಾನತು

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ನಿಟ್ಟಿನಲ್ಲಿ ಕರ್ತವ್ಯ ಲೋಪ ಎಸಗಿದ್ದ 9 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಜೊತೆಗೆ ಉಳಿದ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಕಳಿಸಲಾಗಿದ್ದು, ಇಂತಹ ತಪ್ಪು ನಡೆದ ಜೈಲಿನ ಡಿಜಿಪಿಗೆ ನೋಟೀಸನ್ನೂ ನೀಡಲಾಗಿದೆ ಎಂದರು.

ಮುಡಾದ ಮಾಜಿ ಆಯುಕ್ತರ ಮೇಲೆ ಆರೋಪವಿದ್ದು, ಅವರನ್ನು ಹಾವೇರಿ ವಿವಿಗೆ ಕುಲಸಚಿವರಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago