ರಾಜ್ಯ

ಸಮಾಜದಲ್ಲಿ ಅಸಮಾನತೆ ಬಯಸುವ ಬಿಜೆಪಿ : ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು : ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು.

ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

ಇದನ್ನೂ ಓದಿ:-ಡಿಕೆಶಿ ನವೆಂಬರ್‌ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್‌ ಆರ್‌ ಶಿವರಾಮೇಗೌಡ

ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.

ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ
ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದುಎಂದರು.

ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ
ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

9 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

9 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

10 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

10 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

10 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

10 hours ago