Vijayendra
ಬೆಂಗಳೂರು: ಹಿಂದೂ ವಿರೋಧಿ ಕುಯುಕ್ತಿ ಚಟುವಟಿಕೆಗಳು ಮತ್ತೆ ತಲೆಯೆತ್ತಿದರೆ ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ‘ಸಂದಿಯಲ್ಲಿ ಸಮಾರಾಧನೆ’ ಮಾಡುವಂತೆ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆಯ ಹೆಸರಿನಲ್ಲಿ ಮತಾಂತರಕ್ಕೆ ಪರೋಕ್ಷ ಪ್ರೇರಣೆ ನೀಡಲು ಹೊರಟು ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನಲ್ಲಿ ಪ್ರಕಟಿಸಿದ್ದ ಹುನ್ನಾರವನ್ನು ಸಮಯೋಚಿತವಾಗಿ ಬಯಲಿಗೆಳೆದ ಪರಿಣಾಮವಾಗಿ ಜನಾಕ್ರೋಶಕ್ಕೆ ಹೆದರಿ ಸರ್ಕಾರ ಆ ಹೆಸರುಗಳ ಪಟ್ಟಿಯನ್ನು ಬೇಷರತ್ತಾಗಿ ಕೈ ಬಿಡಿಸಿರುವುದು ಹಿಂದೂ ಸಮಾಜದ ಒಗ್ಗಟ್ಟಿನ ಆಕ್ರೋಶದ ಪ್ರತಿಫಲನವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಇದನ್ನು ಓದಿ: ಇಷ್ಟು ದಿನ ಹಿಂದೂ ವಿರೋಧಿಯಾಗಿದ್ದ ಸಿಎಂ, ಈಗ ಪೊಲೀಸ್ ಇಲಾಖೆ ವಿರೋಧಿ: ಪ್ರತಾಪ್ ಸಿಂಹ
ಬಿಜೆಪಿ ಹಾಗೂ ಜಾಗೃತ ಹಿಂದೂ ಸಮುದಾಯಗಳ ಪ್ರತಿಭಟನೆಗೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಬೆಚ್ಚಿಬಿದ್ದಿದೆ. ಅದರ ಪರಿಣಾಮವಾಗಿ ಹಿಂದುಳಿದ ವರ್ಗಗಳ ಆಯೋಗ ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನೊಂದಿಗೆ ಸೇರಿಸಿ ಪ್ರಕಟಿಸಿದ್ದ ಪಟ್ಟಿ ‘ಗುಂಡಿಗೆ’ ಬಿದ್ದಿದೆ. ಅಲ್ಪಸಂಖ್ಯಾತರನ್ನು ಓಲೈಸುವುದೇ ತನ್ನ ಆದ್ಯತೆಯ ಕಾರ್ಯಸೂಚಿಯನ್ನಾಗಿರಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ವಿರುದ್ಧ ಸಂದರ್ಭ ಬಂದಾಗಲೆಲ್ಲ ಕುತಂತ್ರ ಹೆಣೆಯುವುದರಲ್ಲಿ ನಿಸ್ಸೀಮತನ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…