Vijayendra
ಬೆಂಗಳೂರು: ಹಿಂದೂ ವಿರೋಧಿ ಕುಯುಕ್ತಿ ಚಟುವಟಿಕೆಗಳು ಮತ್ತೆ ತಲೆಯೆತ್ತಿದರೆ ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ‘ಸಂದಿಯಲ್ಲಿ ಸಮಾರಾಧನೆ’ ಮಾಡುವಂತೆ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆಯ ಹೆಸರಿನಲ್ಲಿ ಮತಾಂತರಕ್ಕೆ ಪರೋಕ್ಷ ಪ್ರೇರಣೆ ನೀಡಲು ಹೊರಟು ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನಲ್ಲಿ ಪ್ರಕಟಿಸಿದ್ದ ಹುನ್ನಾರವನ್ನು ಸಮಯೋಚಿತವಾಗಿ ಬಯಲಿಗೆಳೆದ ಪರಿಣಾಮವಾಗಿ ಜನಾಕ್ರೋಶಕ್ಕೆ ಹೆದರಿ ಸರ್ಕಾರ ಆ ಹೆಸರುಗಳ ಪಟ್ಟಿಯನ್ನು ಬೇಷರತ್ತಾಗಿ ಕೈ ಬಿಡಿಸಿರುವುದು ಹಿಂದೂ ಸಮಾಜದ ಒಗ್ಗಟ್ಟಿನ ಆಕ್ರೋಶದ ಪ್ರತಿಫಲನವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಇದನ್ನು ಓದಿ: ಇಷ್ಟು ದಿನ ಹಿಂದೂ ವಿರೋಧಿಯಾಗಿದ್ದ ಸಿಎಂ, ಈಗ ಪೊಲೀಸ್ ಇಲಾಖೆ ವಿರೋಧಿ: ಪ್ರತಾಪ್ ಸಿಂಹ
ಬಿಜೆಪಿ ಹಾಗೂ ಜಾಗೃತ ಹಿಂದೂ ಸಮುದಾಯಗಳ ಪ್ರತಿಭಟನೆಗೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಬೆಚ್ಚಿಬಿದ್ದಿದೆ. ಅದರ ಪರಿಣಾಮವಾಗಿ ಹಿಂದುಳಿದ ವರ್ಗಗಳ ಆಯೋಗ ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನೊಂದಿಗೆ ಸೇರಿಸಿ ಪ್ರಕಟಿಸಿದ್ದ ಪಟ್ಟಿ ‘ಗುಂಡಿಗೆ’ ಬಿದ್ದಿದೆ. ಅಲ್ಪಸಂಖ್ಯಾತರನ್ನು ಓಲೈಸುವುದೇ ತನ್ನ ಆದ್ಯತೆಯ ಕಾರ್ಯಸೂಚಿಯನ್ನಾಗಿರಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ವಿರುದ್ಧ ಸಂದರ್ಭ ಬಂದಾಗಲೆಲ್ಲ ಕುತಂತ್ರ ಹೆಣೆಯುವುದರಲ್ಲಿ ನಿಸ್ಸೀಮತನ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…