ರಾಜ್ಯ

ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ: ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ಹಿಂದೂ ವಿರೋಧಿ ಕುಯುಕ್ತಿ ಚಟುವಟಿಕೆಗಳು ಮತ್ತೆ ತಲೆಯೆತ್ತಿದರೆ ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ‘ಸಂದಿಯಲ್ಲಿ ಸಮಾರಾಧನೆ’ ಮಾಡುವಂತೆ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆಯ ಹೆಸರಿನಲ್ಲಿ ಮತಾಂತರಕ್ಕೆ ಪರೋಕ್ಷ ಪ್ರೇರಣೆ ನೀಡಲು ಹೊರಟು ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನಲ್ಲಿ ಪ್ರಕಟಿಸಿದ್ದ ಹುನ್ನಾರವನ್ನು ಸಮಯೋಚಿತವಾಗಿ ಬಯಲಿಗೆಳೆದ ಪರಿಣಾಮವಾಗಿ ಜನಾಕ್ರೋಶಕ್ಕೆ ಹೆದರಿ ಸರ್ಕಾರ ಆ ಹೆಸರುಗಳ ಪಟ್ಟಿಯನ್ನು ಬೇಷರತ್ತಾಗಿ ಕೈ ಬಿಡಿಸಿರುವುದು ಹಿಂದೂ ಸಮಾಜದ ಒಗ್ಗಟ್ಟಿನ ಆಕ್ರೋಶದ ಪ್ರತಿಫಲನವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ: ಇಷ್ಟು ದಿನ‌ ಹಿಂದೂ ವಿರೋಧಿಯಾಗಿದ್ದ ಸಿ‌ಎಂ, ಈಗ ಪೊಲೀಸ್ ಇಲಾಖೆ ವಿರೋಧಿ: ಪ್ರತಾಪ್‌ ಸಿಂಹ 

ಬಿಜೆಪಿ ಹಾಗೂ ಜಾಗೃತ ಹಿಂದೂ ಸಮುದಾಯಗಳ ಪ್ರತಿಭಟನೆಗೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಬೆಚ್ಚಿಬಿದ್ದಿದೆ. ಅದರ ಪರಿಣಾಮವಾಗಿ ಹಿಂದುಳಿದ ವರ್ಗಗಳ ಆಯೋಗ ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನೊಂದಿಗೆ ಸೇರಿಸಿ ಪ್ರಕಟಿಸಿದ್ದ ಪಟ್ಟಿ ‘ಗುಂಡಿಗೆ’ ಬಿದ್ದಿದೆ. ಅಲ್ಪಸಂಖ್ಯಾತರನ್ನು ಓಲೈಸುವುದೇ ತನ್ನ ಆದ್ಯತೆಯ ಕಾರ್ಯಸೂಚಿಯನ್ನಾಗಿರಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ವಿರುದ್ಧ ಸಂದರ್ಭ ಬಂದಾಗಲೆಲ್ಲ ಕುತಂತ್ರ ಹೆಣೆಯುವುದರಲ್ಲಿ ನಿಸ್ಸೀಮತನ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago