ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್‌ ಯು.ಟಿ.ಖಾದರ್‌ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು ನಡುವೆ ಈ ವಿಷಯ ತರಲಾಗಿದೆ. ಇದು ಸದನಕ್ಕೆ ಹಾಗೂ ಸ್ಪೀಕರ್‌ಗೆ ಗೌರವ ತರುವ ಕೆಲಸವಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸದಸ್ಯರು ಮಾತನಾಡುವಾಗ ಅವರನ್ನು ಒತ್ತಾಯಪೂರ್ವಕವಾಗಿ ಸ್ಪೀಕರ್‌ ಕೂರಿಸುತ್ತಿದ್ದಾರೆ. ಇದು ಸದನಕ್ಕೆ ಅಥವಾ ಸ್ಪೀಕರ್‌ಗೆ ಗೌರವ ತರುವುದಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಸದನ ನಡೆದಿಲ್ಲ. ಸ್ಪೀಕರ್‌ ಸದನ ನಡೆಸಲು ಸಂಪೂರ್ಣ ವಿಫಲರಾಗಿದ್ದಾರೆ. ಇಂತಹ ಸ್ಪೀಕರ್‌ರಿಂದ ನಾವು ಏನೂ ನಿರೀಕ್ಷೆ ಮಾಡಲಾಗುವುದಿಲ್ಲ. ಮಳೆ ಹಾನಿ ಕುರಿತು 15 ದಿನಗಳ ಹಿಂದೆಯೇ ಹೇಳಬೇಕಿತ್ತು. ಸ್ಪೀಕರ್‌ ನಡೆ ಸದನಕ್ಕೆ ಗೌರವ ತರುವುದಿಲ್ಲ. ಸೋಮವಾರದ ಅಧಿವೇಶನದಲ್ಲಿ ಬಿಜೆಪಿ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದರೆ ಅದು ಕಾಂಗ್ರೆಸ್‌ ಸರ್ಕಾರದ ಪ್ರಾಯೋಜಿತ ಕೊಲೆ. 187 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಲೂಟಿ ಮಾಡಿ ಚುನಾವಣೆಗೆ ಬಳಸಿದ್ದಾರೆ ಎಂಬುದು ಜಾರಿ ನಿರ್ದೇಶನಾಲಯದ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟವಾಗಿದೆ. ಈ ಕುರಿತು ಸದನದಲ್ಲಿ ನಿಲುವಳಿ ಸೂಚನೆಯಲ್ಲಿ ಮಾತನಾಡಲಾಗಿದೆ. ಲೂಟಿಯಾದ ಹಣವನ್ನು ಯಾವಾಗ ವಾಪಸ್‌ ತರಲಾಗುತ್ತದೆ ಎಂದು ನಾವು ಪ್ರಶ್ನೆ ಮಾಡಿದ್ದೇವೆ. ಇದು ಎಟಿಎಂ ಸರ್ಕಾರದ ಮೂಲಕ ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ತಲುಪಿದೆಯೇ ಎಂದು ಕೇಳಿದ್ದೇವೆ ಎಂದರು.

ಈ ಹಗರಣ ಮಾಡಿದ ತಪ್ಪಿತಸ್ಥರಿಗೆ ಶಿಕ್ಷಯಾಗಬೇಕೆಂದರೆ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್‌ ಅವರ ಹೆಸರು ಎಫ್‌ಐಆರ್‌ನಲ್ಲಿ ಬರಬೇಕು. ಆದರೆ ಇವರಿಬ್ಬರ ಹೆಸರು ಕೂಡ ಎಫ್‌ಐಆರ್‌ನಲ್ಲಿ ಬಾರದಂತೆ ಮಾಡಲು ಪೊಲೀಸರಿಗೆ ಒತ್ತಡ ಹೇರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದಿಂದ ಭಾಷಣ ಮಾಡಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾರೂ ಭಾಗಿಯಾಗಿಲ್ಲ ಎಂದಿದ್ದಾರೆ. ಆದರೆ ಸಚಿವರು ರಾಜೀನಾಮೆ ನೀಡಿದ್ದಾರೆ. ಹಣ ಲೂಟಿಯಾಗಿದೆ ಎಂದು ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. 40 ಪರ್ಸೆಂಟ್‌ ಎಂದು ಭಿತ್ತಿಪತ್ರ ಅಂಟಿಸಿ, ಅಧಿಕಾರಕ್ಕೆ ಬಂದ ಮೇಲೆ ತನಿಖೆಗೆ ವಹಿಸಿದ್ದಾರೆ. ಆದರೆ ಇದರ ವರದಿ ಮಾತ್ರ ಬಂದಿಲ್ಲ. ಆದರೂ ಬಿಜೆಪಿ ಹಗರಣ ಮಾಡಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಪ್ರಶ್ನೆ ಮಾಡಿದ ನಂತರ ದಿಢೀರನೆ ಹಳೆ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಗರಣದಲ್ಲಿ ಭಾಗಿಯಾಗಿದ್ದು, ರಾಜೀನಾಮೆ ಕೊಡಬೇಕಿತ್ತು. ಆದರೆ ಅದನ್ನೂ ಮಾಡಿಲ್ಲ, ಸಿಬಿಐ ತನಿಖೆಗೂ ವಹಿಸಿಲ್ಲ. ಹಗರಣವನ್ನು ಮುಚ್ಚಿಹಾಕಲು ಎಲ್ಲ ವ್ಯವಸ್ಥಿತ ಸಂಚು ಮಾಡಲಾಗಿದೆ. ಬಿಜೆಪಿಯಿಂದ ಇದರ ವಿರುದ್ಧ ತೀವ್ರ ಹೋರಾಟ ಮುಂದುವರಿಯಲಿದೆ. ದಲಿತರ ಹಣ ವಾಪಸ್‌ ಸಿಗಬೇಕು, ಅಪರಾಧಿಗಳಿಗೆ ಶಿಕ್ಷೆ ಸಿಗಬೇಕು ಎಂಬುದು ಬಿಜೆಪಿಯ ಬೇಡಿಕೆ ಎಂದರು.

ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಹಾನಿಯಾಗಿ ಜನರು ಸತ್ತಿದ್ದರೂ ಸಚಿವರು ಘಟನಾ ಸ್ಥಳಕ್ಕೆ ಹೋಗಿ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಹಾನಿಗೊಳಗಾದವರಿಗೆ ಬಿಜೆಪಿ ಸರ್ಕಾರ 10,000 ರೂ. ಪರಿಹಾರ ನೀಡುತ್ತಿತ್ತು. ಈಗ ಸರ್ಕಾರ ಪರಿಹಾರವನ್ನು 5,000 ರೂ. ಗೆ ಇಳಿಸಿದೆ. ಮನೆ ಕಳೆದುಕೊಂಡವರಿಗೆ ಬಿಜೆಪಿ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಈಗ ಅದು ಕೂಡ ಇಲ್ಲ. ಸರ್ಕಾರ ದಿವಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

36 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

14 hours ago