ಬೆಂಗಳೂರು: ಆರ್ಎಸ್ಎಸ್ನ ಆಂತರಿಕ ಸಮೀಕ್ಷೆ ಪ್ರಕಾರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ(ಏ.೬) ಹೇಳಿದ್ದಾರೆ.
ಬರ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿದ್ದಾರೆ. ಅವರು ತಪ್ಪು ಮಾಹಿತಿಯ ಮಂತ್ರಿ ಆಗಿರಬೇಕು ಎಂದು ಟೀಕಿಸಿದ್ದಾರೆ.
ಆರ್ಎಸ್ಎಸ್ನ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿಗೆ 200 ಸೀಟು ಬರುವುದಿಲ್ಲ ಎಂದು ಆರ್ಎಸ್ಎಸ್ ಹೇಳುತ್ತಿದೆ. ರಾಜ್ಯದಲ್ಲಿ ಬಿಜೆಪಿ ಎಂಟು ಸೀಟು ದಾಟುವುದಿಲ್ಲ. ಹದಿನಾಲ್ಕರಿಂದ ಹದಿನೈದು ಸೀಟುಗಳಲ್ಲಿ ಅವರು ಹೇಗೆ ಗೆಲ್ಲುತ್ತಾರೆ? ಎಂದು ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು.
ಕೆಲವು ಬಿಜೆಪಿ ನಾಯಕರು ಒಂದು ಕುಟುಂಬದಿಂದ ರಾಜ್ಯದಲ್ಲಿ ಬಿಜೆಪಿ ಕಲುಷಿತವಾಗಿದೆ ಎಂದು ಹೇಳುತ್ತಿದ್ದಾರೆ, ಅವರು ಮೂಲ ಬಿಜೆಪಿಯನ್ನು ಮರುಸ್ಥಾಪಿಸಲು ಬಯಸುತ್ತಿರುವುದಾಗಿ ಹೇಳುತ್ತಿದ್ದಾರೆ. ನಾವು ಅದನ್ನು ಹೇಳುತ್ತೇವೆಯೇ? ಇಲ್ಲ, ಅವರೇ ಬಿಜೆಪಿಯಲ್ಲಿ ಹಿಂದುತ್ವವಾದಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಅನಂತ್ಕುಮಾರ್ ಹೆಗಡೆ, ಈಶ್ವರಪ್ಪ ಅವರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದಾರೆ ಎಂದರು.
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…