ರಾಜ್ಯ

ಆರ್‌ಎಸ್‌ಎಸ್‌ ಸಮೀಕ್ಷೆಯಲ್ಲಿ ಬಿಜೆಪಿ 200ಸ್ಥಾನವನ್ನು ಗೆಲ್ಲುವುದಿಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ(ಏ.೬) ಹೇಳಿದ್ದಾರೆ.

ಬರ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿದ್ದಾರೆ. ಅವರು ತಪ್ಪು ಮಾಹಿತಿಯ ಮಂತ್ರಿ ಆಗಿರಬೇಕು ಎಂದು ಟೀಕಿಸಿದ್ದಾರೆ.

ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿಗೆ 200 ಸೀಟು ಬರುವುದಿಲ್ಲ ಎಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ರಾಜ್ಯದಲ್ಲಿ ಬಿಜೆಪಿ ಎಂಟು ಸೀಟು ದಾಟುವುದಿಲ್ಲ. ಹದಿನಾಲ್ಕರಿಂದ ಹದಿನೈದು ಸೀಟುಗಳಲ್ಲಿ ಅವರು ಹೇಗೆ ಗೆಲ್ಲುತ್ತಾರೆ? ಎಂದು ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು.

ಕೆಲವು ಬಿಜೆಪಿ ನಾಯಕರು ಒಂದು ಕುಟುಂಬದಿಂದ ರಾಜ್ಯದಲ್ಲಿ ಬಿಜೆಪಿ ಕಲುಷಿತವಾಗಿದೆ ಎಂದು ಹೇಳುತ್ತಿದ್ದಾರೆ, ಅವರು ಮೂಲ ಬಿಜೆಪಿಯನ್ನು ಮರುಸ್ಥಾಪಿಸಲು ಬಯಸುತ್ತಿರುವುದಾಗಿ ಹೇಳುತ್ತಿದ್ದಾರೆ. ನಾವು ಅದನ್ನು ಹೇಳುತ್ತೇವೆಯೇ? ಇಲ್ಲ, ಅವರೇ ಬಿಜೆಪಿಯಲ್ಲಿ ಹಿಂದುತ್ವವಾದಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಅನಂತ್‌ಕುಮಾರ್ ಹೆಗಡೆ, ಈಶ್ವರಪ್ಪ ಅವರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದಾರೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

8 mins ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

10 mins ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

13 mins ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

14 mins ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

17 mins ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

20 mins ago