ಬೆಂಗಳೂರು: ಸಾರಿಗೆ ನೌಕರರಿಗೆ ಬಾಕಿ ಬರಬೇಕಾದ ಹಣವನ್ನು ರಾಜ್ಯ ಸರ್ಕಾರ ಕೊಡದೆ ಇರುವುದರಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಇದಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಹೇಳಿದ್ದಾರೆ.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು, ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7401 ಕೋಟಿ ಹಣ ಬಾಕಿ ಬರಬೇಕಿದೆ. ಶಕ್ತಿ ಯೋಜನೆಗೆ 1788 ಕೋಟಿ ಹಣ ಬಾಕಿ ಇದೆ. ಆದರೂ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಹಣದ ಕೊರತೆ ಇಲ್ಲ ಎಂದು ಹೇಳುತ್ತಾ ಜಾತ್ರೆ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ ಎಂದು ಹೇಳುತ್ತಾರೆ. ಆದರೆ ಇಷ್ಟು ಬಾಕಿ ಕೊಡದ ಸಿಎಂ ಹೇಗೆ ಸಾಧನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಇತ್ತೀಚಿಗೆ ಸಿಎಸ್ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಗಮಕ್ಕೆ 3650 ಕೋಟಿ ಹಣ ನಷ್ಟದ ಕುರಿತು ಚರ್ಚಿಸಿದರು. ಈ ನಷ್ಟ ತುಂಬಿಸಲು ನಿಗಮದ 200 ಎಕರೆ ಜಾಗ ಆದಾಯ ಕ್ರೋಢಿಕರಣಕ್ಕಾಗಿ ಬಳಸಲು ಹಾಗೂ 15% ಪ್ರಯಾಣದ ದರ ಹೆಚ್ಚಿಸಲು ಸಿಎಸ್ ಸಭೆಯಲ್ಲಿ ಸಲಹೆ ನೀಡಿದ್ದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಮೇಲಾಗಿದೆ. ಆದರೆ ಸರ್ಕಾರ 1 ಲಕ್ಷ 5 ಸಾವಿರ ಕೋಟಿ ಸಾಲ ಮಾಡುವ ಮೂಲಕ ದಿವಾಳಿ ಆಗಿದೆ ಎಂದು ಆರೋಪಿಸಿದರು.
ಈ ಸರ್ಕಾರದ ಆಡಳಿತದಲ್ಲಿ ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡಿದ್ದಾರೆ. ರೈತರ ಪಂಪ್ಸೆಟ್ಗೆ ಕೊಡ್ತಿದ್ದ 25 ಸಾವಿರ ಸಬ್ಸಿಡಿ ಕಟ್ ಮಾಡಿದ್ದಾರೆ. ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಿದೆ. ಆದರೂ ಸಾರಿಗೆ ನಿಗಮಕ್ಕೆ ಹಣ ನೀಡಿಲ್ಲ. ಆದ್ದರಿಂದ ಸಾರಿಗೆ ನೌಕರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…