ರಾಜ್ಯ

ಸಾರಿಗೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ: ಪಿ.ರಾಜೀವ್‌

ಬೆಂಗಳೂರು: ಸಾರಿಗೆ ನೌಕರರಿಗೆ ಬಾಕಿ ಬರಬೇಕಾದ ಹಣವನ್ನು ರಾಜ್ಯ ಸರ್ಕಾರ ಕೊಡದೆ ಇರುವುದರಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಇದಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಹೇಳಿದ್ದಾರೆ.

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಅವರು, ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7401 ಕೋಟಿ ಹಣ ಬಾಕಿ ಬರಬೇಕಿದೆ. ಶಕ್ತಿ ಯೋಜನೆಗೆ 1788 ಕೋಟಿ ಹಣ ಬಾಕಿ ಇದೆ. ಆದರೂ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಹಣದ ಕೊರತೆ ಇಲ್ಲ ಎಂದು ಹೇಳುತ್ತಾ ಜಾತ್ರೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ ಎಂದು ಹೇಳುತ್ತಾರೆ. ಆದರೆ ಇಷ್ಟು ಬಾಕಿ ಕೊಡದ ಸಿಎಂ ಹೇಗೆ ಸಾಧನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಇತ್ತೀಚಿಗೆ ಸಿಎಸ್‌ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಗಮಕ್ಕೆ 3650 ಕೋಟಿ ಹಣ ನಷ್ಟದ ಕುರಿತು ಚರ್ಚಿಸಿದರು. ಈ ನಷ್ಟ ತುಂಬಿಸಲು ನಿಗಮದ 200 ಎಕರೆ ಜಾಗ ಆದಾಯ ಕ್ರೋಢಿಕರಣಕ್ಕಾಗಿ ಬಳಸಲು ಹಾಗೂ 15% ಪ್ರಯಾಣದ ದರ ಹೆಚ್ಚಿಸಲು ಸಿಎಸ್‌ ಸಭೆಯಲ್ಲಿ ಸಲಹೆ ನೀಡಿದ್ದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಮೇಲಾಗಿದೆ. ಆದರೆ ಸರ್ಕಾರ 1 ಲಕ್ಷ 5 ಸಾವಿರ ಕೋಟಿ ಸಾಲ ಮಾಡುವ ಮೂಲಕ ದಿವಾಳಿ ಆಗಿದೆ ಎಂದು ಆರೋಪಿಸಿದರು.

ಈ ಸರ್ಕಾರದ ಆಡಳಿತದಲ್ಲಿ ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡಿದ್ದಾರೆ. ರೈತರ ಪಂಪ್‌ಸೆಟ್‌ಗೆ ಕೊಡ್ತಿದ್ದ 25 ಸಾವಿರ ಸಬ್ಸಿಡಿ ಕಟ್ ಮಾಡಿದ್ದಾರೆ. ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಿದೆ. ಆದರೂ ಸಾರಿಗೆ ನಿಗಮಕ್ಕೆ ಹಣ ನೀಡಿಲ್ಲ. ಆದ್ದರಿಂದ ಸಾರಿಗೆ ನೌಕರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

3 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

7 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

10 hours ago