ರಾಜ್ಯ

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಹೆಚ್ಚಳ ಮಾಡಿದ್ದು ತನ್ನ ಬಡವರ ವಿರೋಧಿ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಮಾರ್ಚ್ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರ ಸುಮಾರು 1300 ರೂ. ಹೆಚ್ಚಳವಾಗಿದೆ. ಹೊಟೆಲ್ ಮಾಲೀಕರು ಅನಿವಾರ್ಯವಾಗಿ ಊಟ, ತಿಂಡಿ, ಕಾಫಿ, ಟೀ ದರ ಹೆಚ್ಚಳ ಮಾಡುತ್ತಾರೆ. ಇದರ ಹೊರೆ ಶ್ರೀಸಾಮಾನ್ಯನ ಮೇಲೆ ಬೀಳಲಿದೆ. ಮತದಾನ ಮುಗಿದ ಕೂಡಲೇ ಕೇಂದ್ರ ಬಿಜೆಪಿ ಸರ್ಕಾರ ಬಡ, ಮಧ್ಯಮವರ್ಗದವರ ಬದುಕನ್ನು ದುರ್ಬರ ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಆಡುಗೆ ಅನಿಲ ಪೂರೈಕೆ ಆಗದೆ ಈಗಾಗಲೇ ಹಲವು ಹೊಟೆಲ್ ಗಳು ಬಂದ್ ಆಗಿದ್ದು, ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಈ ಸನ್ನಿವೇಶದಲ್ಲಿ 993 ರೂ. ಪ್ರತಿ ಸಿಲಿಂಡರ್ ಗೆ ಹೆಚ್ಚಳ ಮಾಡುವ ಮೂಲಕ ಕಾರ್ಮಿಕ ದಿನದಂದು ಕೇಂದ್ರ ಸರ್ಕಾರ ತನ್ನ ಕಾರ್ಮಿಕ ವಿರೋಧಿ ನೀತಿ ಪ್ರದರ್ಶಿಸಿದೆ ಎಂದು ತಿಳಿಸಿದ್ದಾರೆ.

ಸರತಿ ಸಾಲಲ್ಲಿ ನಿಂತರೂ ಸಿ.ಎನ್.ಜಿ. ಅನಿಲ ಸಿಗದೆ ತತ್ತರಿಸಿರುವ ಆಟೋ ಚಾಲಕರ ಮೇಲೂ ಕೇಂದ್ರ ಸರ್ಕಾರ ಗದಾ ಪ್ರಹಾರ ಮಾಡಿದೆ. ಯುಪಿಎ ಕಾರ್ಯಕಾಲದಲ್ಲಿ ಅಡುಗೆ ಅನಿಲ ದರ 10-15 ರೂ ಹೆಚ್ಚಳವಾದರೆ, ರೂಪಾಯಿ ಮೌಲ್ಯ ಡಾಲರ್ ಎದುರು ಕೆಲವೇ ಪೈಸೆ ಕುಸಿತವಾದರೂ ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ನಾಯಕರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಅವರು ಈಗ ತಮ್ಮ ತಾಕತ್ತು ಪ್ರದರ್ಶಿಸಲಿ, ಪ್ರಧಾನಿ ನರೇಂದ್ರ ಮೋದಿ ದುರಾಡಳಿತದ ವಿರುದ್ಧ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

5 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

5 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

5 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

5 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

5 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

8 hours ago