ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಹೆಚ್ಚಳ ಮಾಡಿದ್ದು ತನ್ನ ಬಡವರ ವಿರೋಧಿ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಮಾರ್ಚ್ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರ ಸುಮಾರು 1300 ರೂ. ಹೆಚ್ಚಳವಾಗಿದೆ. ಹೊಟೆಲ್ ಮಾಲೀಕರು ಅನಿವಾರ್ಯವಾಗಿ ಊಟ, ತಿಂಡಿ, ಕಾಫಿ, ಟೀ ದರ ಹೆಚ್ಚಳ ಮಾಡುತ್ತಾರೆ. ಇದರ ಹೊರೆ ಶ್ರೀಸಾಮಾನ್ಯನ ಮೇಲೆ ಬೀಳಲಿದೆ. ಮತದಾನ ಮುಗಿದ ಕೂಡಲೇ ಕೇಂದ್ರ ಬಿಜೆಪಿ ಸರ್ಕಾರ ಬಡ, ಮಧ್ಯಮವರ್ಗದವರ ಬದುಕನ್ನು ದುರ್ಬರ ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.
ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಆಡುಗೆ ಅನಿಲ ಪೂರೈಕೆ ಆಗದೆ ಈಗಾಗಲೇ ಹಲವು ಹೊಟೆಲ್ ಗಳು ಬಂದ್ ಆಗಿದ್ದು, ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಈ ಸನ್ನಿವೇಶದಲ್ಲಿ 993 ರೂ. ಪ್ರತಿ ಸಿಲಿಂಡರ್ ಗೆ ಹೆಚ್ಚಳ ಮಾಡುವ ಮೂಲಕ ಕಾರ್ಮಿಕ ದಿನದಂದು ಕೇಂದ್ರ ಸರ್ಕಾರ ತನ್ನ ಕಾರ್ಮಿಕ ವಿರೋಧಿ ನೀತಿ ಪ್ರದರ್ಶಿಸಿದೆ ಎಂದು ತಿಳಿಸಿದ್ದಾರೆ.
ಸರತಿ ಸಾಲಲ್ಲಿ ನಿಂತರೂ ಸಿ.ಎನ್.ಜಿ. ಅನಿಲ ಸಿಗದೆ ತತ್ತರಿಸಿರುವ ಆಟೋ ಚಾಲಕರ ಮೇಲೂ ಕೇಂದ್ರ ಸರ್ಕಾರ ಗದಾ ಪ್ರಹಾರ ಮಾಡಿದೆ. ಯುಪಿಎ ಕಾರ್ಯಕಾಲದಲ್ಲಿ ಅಡುಗೆ ಅನಿಲ ದರ 10-15 ರೂ ಹೆಚ್ಚಳವಾದರೆ, ರೂಪಾಯಿ ಮೌಲ್ಯ ಡಾಲರ್ ಎದುರು ಕೆಲವೇ ಪೈಸೆ ಕುಸಿತವಾದರೂ ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ನಾಯಕರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಅವರು ಈಗ ತಮ್ಮ ತಾಕತ್ತು ಪ್ರದರ್ಶಿಸಲಿ, ಪ್ರಧಾನಿ ನರೇಂದ್ರ ಮೋದಿ ದುರಾಡಳಿತದ ವಿರುದ್ಧ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…