ರಾಜ್ಯ

ಬೆಂಗಳೂರಿಗೆ ಬಿಜೆಪಿ ಕೊಡುಗೆ ಶೂನ್ಯ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ 500 ಕಿ.ಮೀ. ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 1.40 ಕೋಟಿ ಜನ ಸಂಖ್ಯೆಯಿದೆ. ದಿನವೊಂದಕ್ಕೆ 3400 ವಾಹನಗಳು ನೋಂದಣಿಯಾಗುತ್ತಿದ್ದು, ಒಟ್ಟು 1.27 ಕೋಟಿ ವಾಹನಗಳಿವೆ. 40 ರಿಂದ 45 ಸಾವಿರ ವಾಹನಗಳು ಬೆಂಗಳೂರಿಗೆ ಪ್ರತಿದಿನ ಬರುತ್ತಿವೆ. ಸಂಚಾರ ದಟ್ಟಣೆ ತೀವ್ರವಾಗಿದೆ. ರಸ್ತೆಗಳನ್ನು ಅಗಲ ಮಾಡಲಾಗುವುದಿಲ್ಲ, ಇರುವುದನ್ನೇ ಸರಿಪಡಿಸಿಕೊಳ್ಳಬೇಕು ಎಂದರು.

117 ಕಿ.ಮೀ. ಫೆರಿಫರಲ್ ಬಿಸನೆಸ್ ಕಾರಿಡಾರ್ ಯೋಜನೆಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಮಂಜೂರಾತಿ ನೀಡಲಾಗಿದೆ. ಭೂಮಿ ಕಳೆದುಕೊಳ್ಳುವ ರೈತರಿಗೆ ಮತ್ತು ಮಾಲೀಕರಿಗೆ ದ್ವಿಗುಣ ಪರಿಹಾರ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶಲ್ಲಿ 3 ಪಟ್ಟು, ನಗರ ಪ್ರದೇಶದಲ್ಲಿ ಟಿಡಿಆರ್, ಎಫ್‍ಎಆರ್ ಮಾದರಿಯಲ್ಲಿ ಪರಿಹಾರ ನೀಡುವ ತೀರ್ಮಾನವನ್ನು ಧೈರ್ಯವಾಗಿ ತೆಗದುಕೊಳ್ಳಲಾಗಿದೆ. ಈ ರಸ್ತೆ ನಿರ್ಮಾಣದಿಂದ ನಗರದ ಒಳಗೆ ಬರುವ ಶೇ. 30ರಷ್ಟು ವಾಹನಗಳ ದಟ್ಟಣೆ ಕಡಿಮೆಯಾಗಲಿದೆ ಎಂಬ ಕಾರಣಕ್ಕೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

2007ರಲ್ಲೇ ಈ ರಸ್ತೆಗೆ ಅಧಿಸೂಚನೆ ಹೊರಡಿಸಿದ್ದರೂ ಈವರೆಗೂ ಅನುಷ್ಠಾನವಾಗಿಲ್ಲ. ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಬೆಂಗಳೂರಿನ ನಾಗರಿಕರಿಗೆ ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಅಭಿಯಾನ ಕೈಗೊಂಡಿದ್ದೇವೆ. ದಾಖಲಾತಿಗಳ ಕ್ರಮಬದ್ಧಗೊಳಿಸುವ ಮೂಲಕ ಏಕರೂಪತೆ ತರುವ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಕೇಂದ್ರದ ಮೋದಿ ಸರ್ಕಾರ ಪ್ರಶಂಸೆ ನೀಡಿದೆ ಎಂದರು.

ಇದನ್ನು ಓದಿ: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರಿನಲ್ಲಿ 1650 ಕಿ.ಮೀ ಪ್ರಮುಖ ರಸ್ತೆಗಳಿವೆ. ಅವುಗಳಲ್ಲಿ 104 ಕಿ.ಮೀ. ವೈಟ್ ಟಾಪಿಂಗ್ ಆಗಿದೆ. 182 ರಸ್ತೆಗಳ 352 ಕಿ.ಮೀ ಉದ್ದವನ್ನು 695 ಕೋಟಿ ರೂ.ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲಾಗುತ್ತಿದ್ದು, ಈಗ ಬ್ಲಾಕ್ ಟಾಪಿಂಗ್ ನಡೆಯುತ್ತಿದೆ. 148 ಕಿ.ಮೀ. ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. 83 ರಸ್ತೆಗಳನ್ನು 1800 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲು ಕ್ರಿಯ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಬಿಜೆಪಿಯವರು ಅನಗತ್ಯ ಟೀಕೆ ಮಾಡುತ್ತಾರೆ. 113 ಕಿ.ಮೀ. ಮೇಲ್ಸೇತುವೆ ರಸ್ತೆ ನಿರ್ಮಾಣಕ್ಕೆ ನಿರ್ಧಾರ ತೆಗೆದುಕೊಂಡಿದ್ದೇವೆ. 40 ಕಿ.ಮೀ. ಸುರಂಗ ರಸ್ತೆ ನಿರ್ಮಿಸಲು ನಿರ್ಧರಿಸಲಾಗಿದ್ದು ಒಬ್ಬ ಸಂಸದ ಟೀಕೆ ಮಾಡುತ್ತಿದ್ದಾನೆ. ಆತ ಖಾಲಿ ಡಬ್ಬ, ಟ್ವೀಟ್ ಮಾಡಿ ಟೀಕೆ ಮಾಡುವುದು ಬಿಟ್ಟು, ಒಂದು ರೂ. ಹಣ ತಂದಿಲ್ಲ. ನಿರ್ಮಲಾ ಸೀತರಾಮ್ ಸೇರಿ ಬೆಂಗಳೂರಿಗೆ ಬಿಜೆಪಿಯ 5 ಜನ ಸಂಸದರಿದ್ದಾರೆ. 10 ರೂ. ಹಣ ತಂದಿಲ್ಲ. ಬೆಂಗಳೂರಿಗೆ ಇವರ ಕೊಡುಗೆ ಶೂನ್ಯ ಎಂದು ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರದ ಬಳಿಕ ಬೆಂಗಳೂರು ದೇಶಕ್ಕೆ ಅತೀ ಹೆಚ್ಚು ತೆರಿಗೆ ಪಾವತಿಸುತ್ತಿದೆ. ಕೇಂದ್ರದಿಂದಲೂ ನಮಗೆ ಹಣಕಾಸಿನ ಸೌಲಭ್ಯ ಬೇಕು ಎಂದು ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಮನವಿ ಮಾಡಿದ್ದೇವೆ. ಈವರೆಗೂ ಉತ್ತರ ಬಂದಿಲ್ಲ ಎಂದು ಆಕ್ಷೇಪಿಸಿದರು.

ಅಭಿವೃದ್ಧಿ ವಿಚಾರಗಳ ಕುರಿತು ತಾವು ವಿರೋಧ ಪಕ್ಷಗಳ ನಾಯಕರ ಜೊತೆ ತಾವು ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.

ಕಸ ವಿಲೇವಾರಿ, ಜಾಹಿರಾತು ಫಲಕ ಸೇರಿದಂತೆ ಎಲ್ಲದಕ್ಕೂ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿದ್ದಾರೆ. ಆದರೂ ನಾವು ಧೈರ್ಯಗೆಡದೇ ಕೆಲಸ ಮಾಡುತ್ತಿದ್ದೇವೆ. ಆದರೆ ಬೆಂಗಳೂರಿನ ಜನ ಮತ ಹಾಕುವಾಗ ನಮ್ಮನ್ನು ಮರೆಯುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

14 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

16 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

21 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago