ರಾಜ್ಯ

ಬಿಜೆಪಿಯ ಪೂರ್ಣ ರೂಪ “ಬೊಗಳೆ ಜನತಾ ಪಾರ್ಟಿ” ಎಂದಾಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಶ್ವಥ್ ನಾರಾಯಣ್, ಸಿ.ಟಿ.ರವಿ ಮತ್ತು ಇತರ ಕೆಲವು ಬಿಜೆಪಿ ನಾಯಕರು ನನ್ನ ಬಗ್ಗೆ ತಪ್ಪು ಮಾಹಿತಿ ಹರಡಲು ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, 2023 ರಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್‌ನ ಅಸಮರ್ಥತೆಯನ್ನು ಒಪ್ಪಿಕೊಂಡಿದ್ದೇನೆ ಎಂದು ನನ್ನ ಹೇಳಿಕೆಗಳನ್ನು ತಿರುಚಿ ಎಡಿಟ್ ಮಾಡಲಾಗಿರುವ ವೀಡಿಯೊವನ್ನು ಪ್ರಸಾರ ಮಾಡುವ ವಂಚನೆಯ ತಂತ್ರವನ್ನು ಬಿಜೆಪಿ ನಾಯಕರು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಜಿ ಶಾಸಕರಾದ ಸಿ.ಟಿ ರವಿ ಅವರೇ, ನೀವು ಮತ್ತು ನಿಮ್ಮ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ‌ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪರದಾಡಬೇಕಾದ ದುಸ್ಥಿತಿಯಲ್ಲಿ ನಿಮ್ಮ ಪಕ್ಷ ಇದೆ. ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ. ನಿಮ್ಮ ಗಮನಕ್ಕಾಗಿ ಈ ಪೂರ್ತಿ ವೀಡಿಯೋ ಎಂದು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾವು ನುಡಿದಂತೆ ನಡೆಯುವವರು, ಹಿಂದೆ 2013 – 18 ರ ಐದು ವರ್ಷಗಳ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಸೇರಿದಂತೆ 30ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಭರವಸೆ ನೀಡದ ಹೊರತಾಗಿಯೂ ಜಾರಿಗೆ ತಂದು ಬದ್ಧತೆ ಪ್ರಸರ್ಶಿಸಿದ್ದೆವು. 2018ರಲ್ಲಿ ಜನತೆಗೆ ನೀಡಿದ್ದ ಶೇ.90 ಭರವಸೆಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈಡೇರಿಸದೆ ಜನ ದ್ರೋಹ ಎಸಗಿತ್ತು.

ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರು 2009ರಲ್ಲಿ ಸಾಲ ಮನ್ನಾ ಮಾಡುವಂತೆ ಸದನದಲ್ಲಿ ಒತ್ತಾಯಿಸಿದ್ದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಏನು ಉತ್ತರ ಕೊಟ್ಟಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ. ರೈತರ ಸಾಲ ಮನ್ನಾ ಮಾಡಲು ನಾವೇನು ನೋಟು ಪ್ರಿಟಿಂಗ್ ಮೆಷಿನ್ ಇಟ್ಟಿದ್ದೇವೆಯೇ? ಎಂದು ಅವರು ಹೇಳಿಲ್ಲವೇ? ಈಗ ಮೊನ್ನೆ ವಿಧಾನಸಭೆಯಲ್ಲಿ ನಾನು ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ನಿಮಗೆ ಬೇಕಾದಷ್ಟೆ ಕಟ್ ಮಾಡಿ ಹಾಕಿ ವಿಕೃತ ಸಂತೋಷ ಪಡುತ್ತಿದ್ದೀರಿ.

ಆದರೆ, ಡಾ. ಅಶ್ವಥ್‌ನಾರಾಯಣ ಕೂಡ ಇದೇ ರೀತಿ ವೀಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ. ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ. ನೀವು ಶೇರ್ ಮಾಡಿರುವ ತಿರುಚಿದ ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ. ನಿಮ್ಮ ಗಮನಕ್ಕೆ ಇರಲಿ ಎಂದು ಪೂರ್ತಿ ವಿಡಿಯೋವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ನಾಯಕರೇ, ನಿಮ್ಮ ಮಾನ ಮರ್ಯಾದೆ ಬಗ್ಗೆ ನಿಮಗೆ ಕನಿಷ್ಠ ಕಾಳಜಿ ಇದ್ದರೆ ನೀವು ಶೇರ್ ಮಾಡಿರುವ ವೀಡಿಯೋ ಡಿಲೀಟ್ ಮಾಡಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ.

ಬಿಜೆಪಿ ನಾಯಕರ ಇಂತಹ ನಡವಳಿಕೆಗಳು ಬಿಜೆಪಿ ಎಂದರೆ “ಬೊಗಳೆ ಜನತಾ ಪಾರ್ಟಿ” ಎಂಬ ಕುಖ್ಯಾತಿಯನ್ನು ದೃಡೀಕರಿಸುವಂತಿದೆ. ಫೇಕ್ ನ್ಯೂಸ್ ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ. ಪ್ರಧಾನಿ ಮೋದಿ ಅವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ “ಫೇಕ್ ನ್ಯೂಸ್ ಪೆಡ್ಲರ್” ಗಳಾದ ಸಿ.ಟಿ ರವಿ ಮತ್ತು ಅಶ್ವತ್ಥ ನಾರಾಯಣ ಅವರನ್ನು ಪಕ್ಷದಿಂದ ಆಚೆಗಟ್ಟಲಿ ಎಂದು ಸವಾಲು ಹಾಕಿದ್ದಾರೆ.

andolanait

Recent Posts

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

8 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

42 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

58 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

1 hour ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

1 hour ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

2 hours ago