ಬೆಂಗಳೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ಎಸ್ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರು ಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…