BJP's job is to abuse women: Minister Lakshmi Hebbalkar attacks MLC Ravi Kumar
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.
ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕ್ಷಮೆಯಾಚನೆಗೆ ಪಟ್ಟು: ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…