ರಾಜ್ಯ

‘ಬೇರೆಯವರ ಕೆರೆಗಳಲ್ಲಿ ಮೀನು ಹಿಡಿಯುವುದೇ ಬಿಜೆಪಿಯವರ ಕೆಲಸ: ವೀರಪ್ಪ ಮೊಯ್ಲಿ

ಬೆಳಗಾವಿ: ಆಪರೇಷನ್ ಕಮಲವನ್ನು ಅಸ್ತ್ರವನ್ನಾಗಿಸಿಕೊಂಡು ಏಳೆಂಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ, ಆದರೆ, ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕ ಘಟಕದಲ್ಲಿ ನಾಯಕತ್ವದ ರೇಸ್ ಇಲ್ಲ, ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ‌ ಮೀನು ಹಿಡಿಯುವುದೇ ಕೆಲಸ. ಅವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗದಿರುವುದು ವಿಪರ್ಯಾಸ’ ಎಂದರು‌.

ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ, ಸರ್ಕಾರ ಗಟ್ಟಿಯಾಗಿ ನಿಂತಿದೆ, ಚುನಾವಣೆ ವೇಳೆ ಘೋಷಿಸಿದ್ದ ಖಾತ್ರಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ, ಎರಡೂವರೆ ವರ್ಷದ ಬಳಿಕ ಸಿ.ಎಂ ಬದಲಾಗುತ್ತಾರಾ’ ಎಂಬ ಪ್ರಶ್ನೆಗೆ, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ಈಗ ಸರ್ಕಾರ ಸುಭದ್ರವಾಗಿದೆ. ನಾವು ಯಾವುದೇ ವದಂತಿಗಳಿಗೆ ಕಿವಿಗೊಡುವುದಿಲ್ಲ ಎಂದು ಉತ್ತರಿಸಿದರು.

ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಮಂತ್ರಿ ಆಗುವ ಆಸೆಯಿಂದ ಒಂದಿಬ್ಬರು ಶಾಸಕರು ಸಿ.ಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿರಬಹುದು. ಅದು ಸರಿಯಲ್ಲ. ಅವರು ಹೇಳಿಕೆ ಕೊಟ್ಟ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾಗುವುದಿಲ್ಲ. ಶಾಸಕರು ಹೀಗೆ ಕೊಡುವುದನ್ನು ನಿಲ್ಲಿಸಬೇಕು ಎಂದು ಕೋರಿದರು.

ಜಿ.ಪರಮೇಶ್ವರ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಡಿನ್ನರ್ ಪಾರ್ಟಿ ಆಯೋಜಿಸಿರುವ ಮತ್ತು ಅದಕ್ಕೆ ಡಿ.ಕೆ.ಶಿವಕುಮಾರ ಆಹ್ವಾನಿಸದ ಕುರಿತು ಪ್ರತಿಕ್ರಿಯಿಸಿದ ಮೊಯ್ಲಿ, ‘ಇದು ಸೌಹಾರ್ದಯುತ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಎಲ್ಲ ನಾಯಕರನ್ನೂ ಇದಕ್ಕೆ ಆಹ್ವಾನಿಸಬೇಕು ಎಂದೇನೂ ಇಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ’ ಎಂದು ಉತ್ತರಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಬಣ್ಣ ಈಗ ಬಯಲಾಗಿದೆ. ತಾವಿಬ್ಬರೂ ಸೇರದಿದ್ದರೆ ಉಳಿಗಾಲವಿಲ್ಲ ಎಂದು ಹೆದರಿ ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಅನುಕೂಲವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago