ರಾಜ್ಯ

ಧರ್ಮದ ಆಧಾರದ ಮೇಲೆ ಪ್ರಚೋದನೆ ಮಾಡುವುದೇ ಬಿಜೆಪಿಯ ಕೆಲಸ: ದಿನೇಶ್‌ ಗುಂಡೂರಾವ್‌

ಕೊಳ್ಳೇಗಾಲ : ಧರ್ಮದ ಆಧಾರದ ಮೇಲೆ ಪ್ರಚೋದನೆ ಮಾಡುವುದೇ ಬಿಜೆಪಿಯ ಕೆಲಸ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ತಿರುಗೇಟು ನೀಡಿದರು.

ಪಟ್ಟಣದಲ್ಲಿ ಸೋಮವಾರ ಆರೋಗ್ಯ ಇಲಾಖೆಯಿಂದ ಆಯೋಜಿಸಿರುವ ಬೃಹತ್ ಆರೋಗ್ಯ ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಸಂಬಂಧ ಮಾತನಾಡಿದರು.

ಭಾವನಾತ್ಮಕವಾಗಿ ಜನರನ್ನು ಕೆರಳಿಸುವುದೇ ಬಿಜೆಪಿಯವರ ಕೆಲಸ. ಈ ಮೂಲಕ ಅವರು ಅತ್ಯಂತ ಕೀಳು ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಉದ್ದೇಶಪೂರ್ವಕವಾಗಿ ಘಟನೆ ಸೃಷ್ಟಿಸಿ ಕೋಮುವಾದಿ ಬಣ್ಣ ಕಟ್ಟಲಾಗುತ್ತಿದೆ. ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರ ಭಾವನೆಗಳ ಮೇಲೆ ಸಂಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಧಾರ್ಮಿಕ ಚಿಂತನೆ ಎಲ್ಲರಲ್ಲೂ ಇದೆ. ನಮ್ಮದು ಜಾತ್ಯತೀತ ರಾಷ್ಟ್ರ. ಹಿಂದೂ, ಕ್ರೈಸ್ತ, ಹಿಂದೂ ರಾಷ್ಟ್ರ ಮಾಡುತ್ತೇನೆ ಎಂಬುದು ತಪ್ಪು. ಸರ್ಕಾರ ತಪ್ಪು ಮಾಡಿದರೆ ಎತ್ತಿ ತೋರಿಸುವ ಬದಲು ವಿವಾದ ಸೃಷ್ಟಿಸುವುದೇ ಇವರ ಕೆಲಸ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ಪೈಸೆ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ನಮ್ಮ ರಾಜ್ಯಕ್ಕೆ ತೆರಿಗೆ ಹಣವೂ ಬರುತ್ತಿಲ್ಲ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡುತ್ತಿಲ್ಲ ಎಂದು ದೂರಿದರು.

ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ. ದಾರಿ ತಪ್ಪಿಸುವುದು. ರಾಜಕೀಯಕ್ಕಾಗಿ ಜನರನ್ನು ದಾರಿ ತಪ್ಪಿಸಬಾರದು. ಕೋಮು ಭಾವನೆ ಕೆರಳಿಸಬಾರದು ಎಂದರು.

ಹಿಂದುಗಳ ಜೊತೆಗೆ ಎಲ್ಲ ಜನರನ್ನು ಪ್ರೀತಿಸಬೇಕು. ಎಚ್.ಡಿ.ಕುಮಾರಸ್ಬಾಮಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಅವರಿಗೆ ಹಿಂದುಗಳ ಬಗ್ಗೆ ಪ್ರೀತಿ ಹೆಚ್ಚಾಗಿರಬಹುದು ಎಂದು ವ್ಯಂಗ್ಯವಾಡಿದರು.

andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

12 hours ago