ರಾಜ್ಯ

ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ತಮ್ಮ ” ಎಕ್ಸ್ ” ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಮೇತ ಸುದೀರ್ಘವಾಗಿ ಬರೆದುಕೊಂಡಿರುವ ಅವರು ಬಿಜೆಪಿ ಆಡಳಿತವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದು ಮಂತ್ರಿ ಸ್ಥಾನವನ್ನು ಕೊಟ್ಟಿರಲಿಲ್ಲ, ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ, ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ಮಟ್ಟದ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:-ರಸ್ತೆ ಗುಡಿಸಿ ಭಾರತೀಯರಿಗೆ ಸ್ವಚ್ಛತೆ ಪಾಠ ಹೇಳುವ ವಿದೇಶಿಗ

ಕಲಬುರಗಿಯ ಜನರ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಅಂಕಿ ಅಂಶಗಳೇ ಮಾತನಾಡುತ್ತವೆ. ಜಿಲ್ಲೆಯ ರೈತರಿಗೆ ಯಾವ ಸರ್ಕಾರ ಎಷ್ಟು ಅನುಕೂಲ ಮಾಡಿಕೊಟ್ಟಿದೆ ಎನ್ನುವುದನ್ನು ನಾವು ಹೇಳುವುದು ಬೇಕಿಲ್ಲ, ಅಂಕಿ ಅಂಶಗಳೇ ಹೇಳುತ್ತವೆ. ಬಿಜೆಪಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳಲ್ಲಿ ನೆರೆ, ಬರದ ವಿಷಯದಲ್ಲಿ ಬಿಜೆಪಿ ಪರಿಹಾರ ಒದಗಿಸಿಕೊಟ್ಟಿದ್ದು ನಗಣ್ಯ.

ಬಿಜೆಪಿ ಅವಧಿಯಲ್ಲಿ ರೈತರಿಗೆ ದೊರಕಿದ ಬೆಳೆ ವಿಮೆ ಪರಿಹಾರ

– 2019 -20ನೇ ಸಾಲಿನಲ್ಲಿ 38,248 ರೈತರಿಗೆ ₹16.65 ಕೋಟಿ ಪರಿಹಾರ ಮಾತ್ರ.
– 2020 – 21ನೇ ಸಾಲಿನಲ್ಲಿ 37,145 ರೈತರಿಗೆ ಕೇವಲ ₹22.97 ಕೋಟಿ ಪರಿಹಾರ ಮಾತ್ರ.
– 2021 – 22ನೇ ಸಾಲಿನಲ್ಲಿ 66,234 ರೈತರಿಗೆ ₹57.95 ಕೋಟಿ ಪರಿಹಾರ ಮಾತ್ರ.
– 2022 – 23ನೇ ಸಾಲಿನಲ್ಲಿ 1,88,600 ರೈತರಿಗೆ ಒದಗಿಸಿದ್ದು ₹108.6 ಕೋಟಿ ಪರಿಹಾರ ಮಾತ್ರ.
– ನಾಲ್ಕು ವರ್ಷದಲ್ಲಿ ಒಟ್ಟು ₹206.17 ಕೋಟಿ ಪರಿಹಾರ ಮಾತ್ರ ನೀಡಲಾಗಿದೆ.

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಅತಿ ಹೆಚ್ಚು ಬೆಳೆ ವಿಮೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ.

– 2023 – 24ನೇ ಸಾಲಿನಲ್ಲಿ 1,59,622 ರೈತರಿಗೆ ₹189.40 ಕೋಟಿ ಪರಿಹಾರ ನೀಡಿದ್ದೇವೆ.
– 2024-25 ನೇ ಸಾಲಿನಲ್ಲಿ 2,03,746 ರೈತರಿಗೆ ₹656.63 ಕೋಟಿ ಪರಿಹಾರ ಒದಗಿಸಿದ್ದೇವೆ.
– ಒಟ್ಟು 3,63,368 ರೈತರಿಗೆ ₹846.03 ಕೋಟಿ ಪರಿಹಾರವನ್ನು ಎರಡೇ ವರ್ಷದಲ್ಲಿ ಒದಗಿಸಿದ್ದೇವೆ.
– ತೊಗರಿಯ ನೆಟೆ ರೋಗದ ಬಗ್ಗೆ ಬಿಜೆಪಿ ತಲೆ ಕೆಡಿಸಿಕೊಂಡಿರಲೇ ಇಲ್ಲ, ನಮ್ಮ ಸರ್ಕಾರವು 2023-24ನೇ ಸಾಲಿನಲ್ಲಿ 1,78,354 ರೈತರಿಗೆ ₹181.86 ಕೋಟಿ ನೆಟೆ ರೋಗದ ಪರಿಹಾರ ಒದಗಿಸಿದೆ.

ಹಾಗೆಯೇ, ಹೆಚ್ಚು ಇನ್ ಪುಟ್ ಸಬ್ಸಿಡಿಯನ್ನು ಒದಗಿಸಿಕೊಡುವ ಮೂಲಕ ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ, ಎರಡು ವರ್ಷಗಳಲ್ಲಿ 3,49,555 ರೈತರಿಗೆ ₹389.14 ಕೋಟಿ ಸಬ್ಸಿಡಿ ಒದಗಿಸಲಾಗಿದೆ.
ಎರಡೇ ವರ್ಷದ ಅವಧಿಯಲ್ಲಿ ಒಟ್ಟು 8,91,277 ರೈತರು ಫಲಾನುಭವಿಗಳಾಗಿದ್ದಾರೆ, ₹1,417.02 ಕೋಟಿ ಹಣ ರೈತರ ಕೈ ಸೇರಿದೆ.

ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಈಗಾಗಲೇ ನೆರೆ ಪರಿಸ್ಥಿತಿ ಇದೆ, ಬಿಜೆಪಿಯವರ ನಕಲಿ ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು, ಹಾಗಾಗಿ ಅವರ ನಕಲಿ ಕಣ್ಣೀರು, ಆತ್ಮವಂಚಕತನದ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

45 mins ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

1 hour ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

2 hours ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

3 hours ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

4 hours ago