ರಾಜ್ಯ

ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ತಮ್ಮ ” ಎಕ್ಸ್ ” ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಮೇತ ಸುದೀರ್ಘವಾಗಿ ಬರೆದುಕೊಂಡಿರುವ ಅವರು ಬಿಜೆಪಿ ಆಡಳಿತವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದು ಮಂತ್ರಿ ಸ್ಥಾನವನ್ನು ಕೊಟ್ಟಿರಲಿಲ್ಲ, ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ, ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ಮಟ್ಟದ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:-ರಸ್ತೆ ಗುಡಿಸಿ ಭಾರತೀಯರಿಗೆ ಸ್ವಚ್ಛತೆ ಪಾಠ ಹೇಳುವ ವಿದೇಶಿಗ

ಕಲಬುರಗಿಯ ಜನರ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಅಂಕಿ ಅಂಶಗಳೇ ಮಾತನಾಡುತ್ತವೆ. ಜಿಲ್ಲೆಯ ರೈತರಿಗೆ ಯಾವ ಸರ್ಕಾರ ಎಷ್ಟು ಅನುಕೂಲ ಮಾಡಿಕೊಟ್ಟಿದೆ ಎನ್ನುವುದನ್ನು ನಾವು ಹೇಳುವುದು ಬೇಕಿಲ್ಲ, ಅಂಕಿ ಅಂಶಗಳೇ ಹೇಳುತ್ತವೆ. ಬಿಜೆಪಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳಲ್ಲಿ ನೆರೆ, ಬರದ ವಿಷಯದಲ್ಲಿ ಬಿಜೆಪಿ ಪರಿಹಾರ ಒದಗಿಸಿಕೊಟ್ಟಿದ್ದು ನಗಣ್ಯ.

ಬಿಜೆಪಿ ಅವಧಿಯಲ್ಲಿ ರೈತರಿಗೆ ದೊರಕಿದ ಬೆಳೆ ವಿಮೆ ಪರಿಹಾರ

– 2019 -20ನೇ ಸಾಲಿನಲ್ಲಿ 38,248 ರೈತರಿಗೆ ₹16.65 ಕೋಟಿ ಪರಿಹಾರ ಮಾತ್ರ.
– 2020 – 21ನೇ ಸಾಲಿನಲ್ಲಿ 37,145 ರೈತರಿಗೆ ಕೇವಲ ₹22.97 ಕೋಟಿ ಪರಿಹಾರ ಮಾತ್ರ.
– 2021 – 22ನೇ ಸಾಲಿನಲ್ಲಿ 66,234 ರೈತರಿಗೆ ₹57.95 ಕೋಟಿ ಪರಿಹಾರ ಮಾತ್ರ.
– 2022 – 23ನೇ ಸಾಲಿನಲ್ಲಿ 1,88,600 ರೈತರಿಗೆ ಒದಗಿಸಿದ್ದು ₹108.6 ಕೋಟಿ ಪರಿಹಾರ ಮಾತ್ರ.
– ನಾಲ್ಕು ವರ್ಷದಲ್ಲಿ ಒಟ್ಟು ₹206.17 ಕೋಟಿ ಪರಿಹಾರ ಮಾತ್ರ ನೀಡಲಾಗಿದೆ.

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಅತಿ ಹೆಚ್ಚು ಬೆಳೆ ವಿಮೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ.

– 2023 – 24ನೇ ಸಾಲಿನಲ್ಲಿ 1,59,622 ರೈತರಿಗೆ ₹189.40 ಕೋಟಿ ಪರಿಹಾರ ನೀಡಿದ್ದೇವೆ.
– 2024-25 ನೇ ಸಾಲಿನಲ್ಲಿ 2,03,746 ರೈತರಿಗೆ ₹656.63 ಕೋಟಿ ಪರಿಹಾರ ಒದಗಿಸಿದ್ದೇವೆ.
– ಒಟ್ಟು 3,63,368 ರೈತರಿಗೆ ₹846.03 ಕೋಟಿ ಪರಿಹಾರವನ್ನು ಎರಡೇ ವರ್ಷದಲ್ಲಿ ಒದಗಿಸಿದ್ದೇವೆ.
– ತೊಗರಿಯ ನೆಟೆ ರೋಗದ ಬಗ್ಗೆ ಬಿಜೆಪಿ ತಲೆ ಕೆಡಿಸಿಕೊಂಡಿರಲೇ ಇಲ್ಲ, ನಮ್ಮ ಸರ್ಕಾರವು 2023-24ನೇ ಸಾಲಿನಲ್ಲಿ 1,78,354 ರೈತರಿಗೆ ₹181.86 ಕೋಟಿ ನೆಟೆ ರೋಗದ ಪರಿಹಾರ ಒದಗಿಸಿದೆ.

ಹಾಗೆಯೇ, ಹೆಚ್ಚು ಇನ್ ಪುಟ್ ಸಬ್ಸಿಡಿಯನ್ನು ಒದಗಿಸಿಕೊಡುವ ಮೂಲಕ ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ, ಎರಡು ವರ್ಷಗಳಲ್ಲಿ 3,49,555 ರೈತರಿಗೆ ₹389.14 ಕೋಟಿ ಸಬ್ಸಿಡಿ ಒದಗಿಸಲಾಗಿದೆ.
ಎರಡೇ ವರ್ಷದ ಅವಧಿಯಲ್ಲಿ ಒಟ್ಟು 8,91,277 ರೈತರು ಫಲಾನುಭವಿಗಳಾಗಿದ್ದಾರೆ, ₹1,417.02 ಕೋಟಿ ಹಣ ರೈತರ ಕೈ ಸೇರಿದೆ.

ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಈಗಾಗಲೇ ನೆರೆ ಪರಿಸ್ಥಿತಿ ಇದೆ, ಬಿಜೆಪಿಯವರ ನಕಲಿ ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು, ಹಾಗಾಗಿ ಅವರ ನಕಲಿ ಕಣ್ಣೀರು, ಆತ್ಮವಂಚಕತನದ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago