ಬೆಂಗಳೂರು: ಎಲ್ಲೆಡೆ ಬಿಸಿಲ ಬೇಗೆ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಹೈರಾಣಾಗಿದ್ದಾರೆ. ಇನ್ನು ಈ ಸುಡು ಬೇಸಿಗೆಯಲ್ಲಿ ಕಪ್ಪು ಕೋಟ್ ಧರಿಸಿ ಕೋರ್ಟಿಗೆ ಬರುತ್ತಿದ್ದ ವಕೀಲರಿಗೆ ಬೇಸಿಗೆಯ ಬಿಸಿ ತುಸು ಹೆಚ್ಚೇ ತಟ್ಟಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 18ರಿಂದ ಮೇ 31ರವರೆಗೆ ವಿಚಾರಣೆಗೆ ಹಾಜರಾಗುವ ರಾಜ್ಯಾದ್ಯಂತ ಜಿಲ್ಲಾ, ವಿಚಾರಣಾ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ.
ಇನ್ನು ವಕೀಲರು ಕಪ್ಪು ಕೋಟಿನ ಬದಲಿಗೆ ಬಿಳಿ ಬಣ್ಣದ ಸಾದಾ ಶರ್ಟ್ ಅಥವಾ ಸಲ್ವಾರ್ ಕಮೀಜ್, ಸೀರೆ ಅಥವಾ ಶಾಂತ ಬಣ್ಣದ ಉಡುಗೆಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 5ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರು ಸಲ್ಲಿಸಿದ್ದ ಮನವಿಯ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದ್ದು, ತಾಪಮಾನವು ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಇಂಥ ಸಂದರ್ಭದಲ್ಲಿ ಕಪ್ಪು ಕೋಟು ಧರಿಸಿ ಬಂದರೆ ಮತ್ತಷ್ಟು ಸಮಸ್ಯೆಯಾಗಲಿದೆ, ಹೀಗಾಗಿ ತಾತ್ಕಾಲಿಕವಾಗಿ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…