ರಾಜ್ಯ

ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ

ಬೆಂಗಳೂರು: ಎಲ್ಲೆಡೆ ಬಿಸಿಲ ಬೇಗೆ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಹೈರಾಣಾಗಿದ್ದಾರೆ. ಇನ್ನು ಈ ಸುಡು ಬೇಸಿಗೆಯಲ್ಲಿ ಕಪ್ಪು ಕೋಟ್‌ ಧರಿಸಿ ಕೋರ್ಟಿಗೆ ಬರುತ್ತಿದ್ದ ವಕೀಲರಿಗೆ ಬೇಸಿಗೆಯ ಬಿಸಿ ತುಸು ಹೆಚ್ಚೇ ತಟ್ಟಿದೆ. ಈ ನಿಟ್ಟಿನಲ್ಲಿ ಏಪ್ರಿಲ್‌ 18ರಿಂದ ಮೇ 31ರವರೆಗೆ ವಿಚಾರಣೆಗೆ ಹಾಜರಾಗುವ ರಾಜ್ಯಾದ್ಯಂತ ಜಿಲ್ಲಾ, ವಿಚಾರಣಾ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್‌ ಧರಿಸುವುದರಿಂದ ಕರ್ನಾಟಕ ಹೈಕೋರ್ಟ್‌ ವಿನಾಯಿತಿ ನೀಡಿದೆ.

ಇನ್ನು ವಕೀಲರು ಕಪ್ಪು ಕೋಟಿನ ಬದಲಿಗೆ ಬಿಳಿ ಬಣ್ಣದ ಸಾದಾ ಶರ್ಟ್‌ ಅಥವಾ ಸಲ್ವಾರ್‌ ಕಮೀಜ್‌, ಸೀರೆ ಅಥವಾ ಶಾಂತ ಬಣ್ಣದ ಉಡುಗೆಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್‌ ಕೆಎಸ್‌ ಭರತ್‌ ಕುಮಾರ್‌ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್‌ 5ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರು ಸಲ್ಲಿಸಿದ್ದ ಮನವಿಯ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದ್ದು, ತಾಪಮಾನವು ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಇಂಥ ಸಂದರ್ಭದಲ್ಲಿ ಕಪ್ಪು ಕೋಟು ಧರಿಸಿ ಬಂದರೆ ಮತ್ತಷ್ಟು ಸಮಸ್ಯೆಯಾಗಲಿದೆ, ಹೀಗಾಗಿ ತಾತ್ಕಾಲಿಕವಾಗಿ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago