ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಇವಿಎಂ ತುಂಬಾ ಚೆನ್ನಾಗಿ ಕೆಲಸ ಮಾಡಿತ್ತು. ಈಗ ಸೋಲುವ ಭೀತಿ ಎದುರಾದಾಗ ಇದೇ ಇವಿಎಂಗಳ ಮೇಲೆ ದೋಷಾರೋಪ ಮಾಡುತ್ತಿದ್ದೀರಿ. ಇದರ ಬದಲು ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದರು.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಗೋವಿಂದ ಕಾರಾಜೋಳ, ವಿಧಾನಪರಿಷತ್ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರ(ಬ್ಯಾಲೆಟ್ ಪೇಪರ್) ಬಳಸಲು ರಾಜ್ಯ ಚುನಾವಣಾ ಆಯೋಗಕ್ಕೆ ತಿದ್ದುಪಡಿ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.
ಇದನ್ನು ಓದಿ:ಉಪ ರಾಷ್ಟ್ರಪತಿ ಚುನಾವಣೆ : ಬಿಜೆಪಿ ಸಂಭಾವ್ಯ ಹೆಸರಲ್ಲಿ ರಾಜ್ಯಪಾಲ ಗೆಹ್ಲೋಟ್ ಹೆಸರು?
ಬಸವರಾಜ ಬೊಮ್ಮಾಯಿ ಮಾತನಾಡಿ, ಬ್ಯಾಲೆಟ್ ಪೇಪರ್ಗಳಲ್ಲಿ ಅಕ್ರಮ ಹಾಗೂ ಗೊಂದಲವಾಗುತ್ತಿತ್ತು. ಇದನ್ನು ತಪ್ಪಿಸಲು ಇವಿಎಂಗಳು ಬಂದವು. 2004, 2009ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನವರಿಗೆ ಇವಿಎಂ ಬಗ್ಗೆ ತಕರಾರು ಇರಲಿಲ್ಲ. ಸಿದ್ದರಾಮಯ್ಯ ಗೆದ್ದಿದ್ದೇ ಇದೇ ಇವಿಎಂನಿಂದ. ಇವರು ಗೆಲ್ಲಲು ಇವಿಎಂ ಬೇಕಾಗಿತ್ತು. ಈಗ ಬೆಂಗಳೂರಿನವರಿಗೆ 25 ವರ್ಷ ಹಿಂದೆ ಹೋಗಿ ಮತಪತ್ರದಲ್ಲಿ ಮತದಾನ ಮಾಡಿ ಅಂತಿದ್ದಾರೆ ಎಂದು ವ್ಯಂಗ್ಯವಾಡಿದರು.
ಹಳ್ಳಿಯವರೇ ಇವಿಎಂಗಳನ್ನು ಅಚ್ಚುಕಟ್ಟಾಗಿ ಬಳಸುವುದನ್ನು ಕಲಿತಿದ್ದಾರೆ. ಇವಿಎಂಗಳಲ್ಲಿ ಗೊಂದಲ, ದೋಷ ಇದ್ದರೆ ಬಂದು ತೋರಿಸಿ, ದಾಖಲೆ ಕೊಡಿ ಎಂದರೂ ಯಾರೂ ಮುಂದೆ ಬರಲಿಲ್ಲ. ಈಗ ಇವಿಎಂಗಳ ಬದಲು ಬ್ಯಾಲೆಟ್ ಪೇಪರ್ಗಳನ್ನು ಅನುಭವದ ಮೇಲೆ ತರುತ್ತಿದ್ದಾರೆಂದು ಸಿಎಂ ಹೇಳಿದ್ದಾರೆ. ಯಾವ ಅನುಭವ ಇದೆ ಇವರಿಗೆ? ನಿಮಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ದರೆ ರಾಜೀನಾಮೆ ಕೊಡಿ. ರಾಜೀನಾಮೆ ಕೊಟ್ಟು ಇವಿಎಂ ಸರಿಯಿಲ್ಲ ಎಂದು ಹೇಳಿ ಎಂದು ಸವಾಲು ಹಾಕಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…