ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ತಡರಾತ್ರಿ ನಿಧನರಾಗಿದ್ದಾರೆ.
ದೇವಸ್ಥಾನವೊಂದರ ಮುಂದೆ ಹಾಡು ಹಾಡುತ್ತಿದ್ದ ಅಂಧ ಸಹೋದರಿಯರಾದ ಮಂಜಮ್ಮ-ರತ್ನಮ್ಮ ಅವರು, ಸರಿಗಮಪ ಶೋನಲ್ಲಿ ಭಾಗಿಯಾಗಿ ಜನಪ್ರಿಯತೆ ಗಳಿಸಿದ್ದರು.
ಇದೀಗ ಮಂಜಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ.
ಇನ್ನು ಇಬ್ಬರಿಗೂ ಹುಟ್ಟಿನಿಂದ ಕಣ್ಣಿಲ್ಲ. ಸಂಗೀತ ಕಲಿಯದ ಅವರು ಹೊಟ್ಟೆಪಾಡಿಗಾಗಿ ಹಾಡಲು ಆರಂಭಿಸಿದ್ದರು. ಅದೇ ಅವರ ವೃತ್ತಿಯೂ ಆಗಿತ್ತು. ಇದೀಗ ಮಂಜಮ್ಮ ನಿಧನರಾಗಿದ್ದು, ರತ್ನಮ್ಮರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎನ್ನಲಾಗುತ್ತಿದೆ.
ಇನ್ನು ಜೀವನ ನಡೆಸಲು ಸೂರು ಇಲ್ಲದ ಇವರಿಗೆ ನಟ ಜಗ್ಗೇಶ್ ತುಮಕೂರಿನಲ್ಲಿ ಒಂದು ಮನೆಯನ್ನು ಕಟ್ಟಿಸಿಕೊಟ್ಟು, ಅದಕ್ಕೆ ಪರಿಮಳ ನಿಲಯ ಎಂದು ಹೆಸರಿಟ್ಟಿದ್ದರು.
ಇದಲ್ಲದೇ ಅರ್ಜುನ್ ಜನ್ಯ ಅವರು ನನಗೆ ಶಕ್ತಿ ಇರುವ ತನಕ ಈ ಸಹೋದರಿಯರ ಕುಟುಂಬದ ತಿಂಗಳ ರೇಷನ್ ವ್ಯವಸ್ಥೆ ನನ್ನದು ಎಂದು ಹೇಳಿದ್ದರು.
ಲಂಡನ್ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ…
ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…
ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…
ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…