ರಾಜ್ಯ

ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ನಿಧನ

ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ತಡರಾತ್ರಿ ನಿಧನರಾಗಿದ್ದಾರೆ.

ದೇವಸ್ಥಾನವೊಂದರ ಮುಂದೆ ಹಾಡು ಹಾಡುತ್ತಿದ್ದ ಅಂಧ ಸಹೋದರಿಯರಾದ ಮಂಜಮ್ಮ-ರತ್ನಮ್ಮ ಅವರು, ಸರಿಗಮಪ ಶೋನಲ್ಲಿ ಭಾಗಿಯಾಗಿ ಜನಪ್ರಿಯತೆ ಗಳಿಸಿದ್ದರು.

ಇದೀಗ ಮಂಜಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ.

ಇನ್ನು ಇಬ್ಬರಿಗೂ ಹುಟ್ಟಿನಿಂದ ಕಣ್ಣಿಲ್ಲ. ಸಂಗೀತ ಕಲಿಯದ ಅವರು ಹೊಟ್ಟೆಪಾಡಿಗಾಗಿ ಹಾಡಲು ಆರಂಭಿಸಿದ್ದರು. ಅದೇ ಅವರ ವೃತ್ತಿಯೂ ಆಗಿತ್ತು. ಇದೀಗ ಮಂಜಮ್ಮ ನಿಧನರಾಗಿದ್ದು, ರತ್ನಮ್ಮರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎನ್ನಲಾಗುತ್ತಿದೆ.

ಇನ್ನು ಜೀವನ ನಡೆಸಲು ಸೂರು ಇಲ್ಲದ ಇವರಿಗೆ ನಟ ಜಗ್ಗೇಶ್‌ ತುಮಕೂರಿನಲ್ಲಿ ಒಂದು ಮನೆಯನ್ನು ಕಟ್ಟಿಸಿಕೊಟ್ಟು, ಅದಕ್ಕೆ ಪರಿಮಳ ನಿಲಯ ಎಂದು ಹೆಸರಿಟ್ಟಿದ್ದರು.

ಇದಲ್ಲದೇ ಅರ್ಜುನ್‌ ಜನ್ಯ ಅವರು ನನಗೆ ಶಕ್ತಿ ಇರುವ ತನಕ ಈ ಸಹೋದರಿಯರ ಕುಟುಂಬದ ತಿಂಗಳ ರೇಷನ್‌ ವ್ಯವಸ್ಥೆ ನನ್ನದು ಎಂದು ಹೇಳಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

50 seconds ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

6 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

13 mins ago

ಓದುಗರ ಪತ್ರ | ಮತದಾನ ಪದ್ಧತಿಯಲ್ಲೂ ಮಾರ್ಪಾಡಾಗಲಿ

ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…

17 mins ago

ಓದುಗರ ಪತ್ರ | ಎಸ್‌ಐಆರ್ ಗೊಂದಲ ಪರಿಹರಿಸಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು…

21 mins ago

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

18 hours ago