ರಾಜ್ಯ

ರಾಜ್ಯದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್‌ಐ

ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ.

ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ.

ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ‌ ಪಡೆದಿದೆ.

ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ‌ ಮೊಹಮ್ಮದ್ ಮೊಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ್ ಮತ್ತು ಬಿಎಂಸಿಆರ್‌ಐನ ಡೀನ್ ಹಾಗೂ ನಿರ್ದೇಶಕ ಡಾ. ರಾಮೇಶ್ ಕೃಷ್ಣ ಇದು ಬಿಎಂಸಿಆರ್ ಐಗೆ ಸಿಕ್ಕಿದ ಮನ್ನಣೆಯಾಗಿದೆ ಎಂದರು.

ಮೆಡಿಕಲ್ ಕಾಲೇಜುಗಳಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣ, ಆಧುನಿಕ ಸೌಲಭ್ಯಗಳು ಹಾಗೂ ಅತ್ಯಾಧುನಿಕ ಮೂಲ ಸೌಕರ್ಯ ಬಗ್ಗೆ ಅಧ್ಯಯನ ನಡೆಸಿ ಈ ಸಮೀಕ್ಷೆ ನಡೆಸಲಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜು ದೇಶದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದ್ದು, ಈ ಗರಿಮೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಇಂಡಿಯಾ ಟುಡೇ ಪ್ರಕಾರ ಟಾಪ್ ಕಾಲೇಜುಗಳು

* ಕಸ್ತೂರಬಾ ಕಾಲೇಜು, ಮಣಿಪಾಲ್
* *ಬೆಂಗಳೂರು ಮೆಡಿಕಲ್ ಕಾಲೇಜು, ಬೆಂಗಳೂರು*
* ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಂಗಳೂರು
* ಕಸ್ತೂರಬಾ ಮೆಡಿಕಲ್ ಕಾಲೇಜು, ಮಂಗಳೂರು
* ಬೆಳಗಾವಿ ಮೆಡಿಕಲ್ ಕಾಲೇಜು, ಬೆಳಗಾವಿ
* ಎಸ್ ಡಿ ಎಂ ಕಾಲೇಜು, ಧಾರವಾಡ
* ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿ, ಮಂಗಳೂರು
* ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜು, ಬೆಳಗಾವಿ
* ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜು, ವಿಜಯಪುರ
* ಚಲ್ಮಡ ಆನಂದ ರಾವ್ ಮೆಡಿಕಲ್ ಕಾಲೇಜು, ಕಲಬುರಗಿ

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago