ರಾಜ್ಯ

ರಾಜ್ಯದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್‌ಐ

ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ.

ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ.

ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ‌ ಪಡೆದಿದೆ.

ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ‌ ಮೊಹಮ್ಮದ್ ಮೊಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ್ ಮತ್ತು ಬಿಎಂಸಿಆರ್‌ಐನ ಡೀನ್ ಹಾಗೂ ನಿರ್ದೇಶಕ ಡಾ. ರಾಮೇಶ್ ಕೃಷ್ಣ ಇದು ಬಿಎಂಸಿಆರ್ ಐಗೆ ಸಿಕ್ಕಿದ ಮನ್ನಣೆಯಾಗಿದೆ ಎಂದರು.

ಮೆಡಿಕಲ್ ಕಾಲೇಜುಗಳಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣ, ಆಧುನಿಕ ಸೌಲಭ್ಯಗಳು ಹಾಗೂ ಅತ್ಯಾಧುನಿಕ ಮೂಲ ಸೌಕರ್ಯ ಬಗ್ಗೆ ಅಧ್ಯಯನ ನಡೆಸಿ ಈ ಸಮೀಕ್ಷೆ ನಡೆಸಲಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜು ದೇಶದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದ್ದು, ಈ ಗರಿಮೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಇಂಡಿಯಾ ಟುಡೇ ಪ್ರಕಾರ ಟಾಪ್ ಕಾಲೇಜುಗಳು

* ಕಸ್ತೂರಬಾ ಕಾಲೇಜು, ಮಣಿಪಾಲ್
* *ಬೆಂಗಳೂರು ಮೆಡಿಕಲ್ ಕಾಲೇಜು, ಬೆಂಗಳೂರು*
* ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಂಗಳೂರು
* ಕಸ್ತೂರಬಾ ಮೆಡಿಕಲ್ ಕಾಲೇಜು, ಮಂಗಳೂರು
* ಬೆಳಗಾವಿ ಮೆಡಿಕಲ್ ಕಾಲೇಜು, ಬೆಳಗಾವಿ
* ಎಸ್ ಡಿ ಎಂ ಕಾಲೇಜು, ಧಾರವಾಡ
* ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿ, ಮಂಗಳೂರು
* ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜು, ಬೆಳಗಾವಿ
* ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜು, ವಿಜಯಪುರ
* ಚಲ್ಮಡ ಆನಂದ ರಾವ್ ಮೆಡಿಕಲ್ ಕಾಲೇಜು, ಕಲಬುರಗಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

36 mins ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

38 mins ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

40 mins ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

42 mins ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

48 mins ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

54 mins ago