BMCRI recognized as the second-best medical college in the state
ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ.
ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ.
ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ ಪಡೆದಿದೆ.
ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ್ ಮತ್ತು ಬಿಎಂಸಿಆರ್ಐನ ಡೀನ್ ಹಾಗೂ ನಿರ್ದೇಶಕ ಡಾ. ರಾಮೇಶ್ ಕೃಷ್ಣ ಇದು ಬಿಎಂಸಿಆರ್ ಐಗೆ ಸಿಕ್ಕಿದ ಮನ್ನಣೆಯಾಗಿದೆ ಎಂದರು.
ಮೆಡಿಕಲ್ ಕಾಲೇಜುಗಳಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣ, ಆಧುನಿಕ ಸೌಲಭ್ಯಗಳು ಹಾಗೂ ಅತ್ಯಾಧುನಿಕ ಮೂಲ ಸೌಕರ್ಯ ಬಗ್ಗೆ ಅಧ್ಯಯನ ನಡೆಸಿ ಈ ಸಮೀಕ್ಷೆ ನಡೆಸಲಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜು ದೇಶದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದ್ದು, ಈ ಗರಿಮೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯವಾಗಿದೆ.
ಇಂಡಿಯಾ ಟುಡೇ ಪ್ರಕಾರ ಟಾಪ್ ಕಾಲೇಜುಗಳು
* ಕಸ್ತೂರಬಾ ಕಾಲೇಜು, ಮಣಿಪಾಲ್
* *ಬೆಂಗಳೂರು ಮೆಡಿಕಲ್ ಕಾಲೇಜು, ಬೆಂಗಳೂರು*
* ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಂಗಳೂರು
* ಕಸ್ತೂರಬಾ ಮೆಡಿಕಲ್ ಕಾಲೇಜು, ಮಂಗಳೂರು
* ಬೆಳಗಾವಿ ಮೆಡಿಕಲ್ ಕಾಲೇಜು, ಬೆಳಗಾವಿ
* ಎಸ್ ಡಿ ಎಂ ಕಾಲೇಜು, ಧಾರವಾಡ
* ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿ, ಮಂಗಳೂರು
* ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜು, ಬೆಳಗಾವಿ
* ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜು, ವಿಜಯಪುರ
* ಚಲ್ಮಡ ಆನಂದ ರಾವ್ ಮೆಡಿಕಲ್ ಕಾಲೇಜು, ಕಲಬುರಗಿ
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…