ರಾಜ್ಯ

ರಾಜ್ಯದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್‌ಐ

ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ.

ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ.

ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ‌ ಪಡೆದಿದೆ.

ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ‌ ಮೊಹಮ್ಮದ್ ಮೊಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ್ ಮತ್ತು ಬಿಎಂಸಿಆರ್‌ಐನ ಡೀನ್ ಹಾಗೂ ನಿರ್ದೇಶಕ ಡಾ. ರಾಮೇಶ್ ಕೃಷ್ಣ ಇದು ಬಿಎಂಸಿಆರ್ ಐಗೆ ಸಿಕ್ಕಿದ ಮನ್ನಣೆಯಾಗಿದೆ ಎಂದರು.

ಮೆಡಿಕಲ್ ಕಾಲೇಜುಗಳಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣ, ಆಧುನಿಕ ಸೌಲಭ್ಯಗಳು ಹಾಗೂ ಅತ್ಯಾಧುನಿಕ ಮೂಲ ಸೌಕರ್ಯ ಬಗ್ಗೆ ಅಧ್ಯಯನ ನಡೆಸಿ ಈ ಸಮೀಕ್ಷೆ ನಡೆಸಲಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜು ದೇಶದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದ್ದು, ಈ ಗರಿಮೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಇಂಡಿಯಾ ಟುಡೇ ಪ್ರಕಾರ ಟಾಪ್ ಕಾಲೇಜುಗಳು

* ಕಸ್ತೂರಬಾ ಕಾಲೇಜು, ಮಣಿಪಾಲ್
* *ಬೆಂಗಳೂರು ಮೆಡಿಕಲ್ ಕಾಲೇಜು, ಬೆಂಗಳೂರು*
* ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಂಗಳೂರು
* ಕಸ್ತೂರಬಾ ಮೆಡಿಕಲ್ ಕಾಲೇಜು, ಮಂಗಳೂರು
* ಬೆಳಗಾವಿ ಮೆಡಿಕಲ್ ಕಾಲೇಜು, ಬೆಳಗಾವಿ
* ಎಸ್ ಡಿ ಎಂ ಕಾಲೇಜು, ಧಾರವಾಡ
* ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿ, ಮಂಗಳೂರು
* ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜು, ಬೆಳಗಾವಿ
* ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜು, ವಿಜಯಪುರ
* ಚಲ್ಮಡ ಆನಂದ ರಾವ್ ಮೆಡಿಕಲ್ ಕಾಲೇಜು, ಕಲಬುರಗಿ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

22 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago