ಬೆಂಗಳೂರು : ನಗರದ ಎಂಜಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಬಸ್ ಹೊತ್ತಿ ಉರಿದೆ. ಬಸ್ ನಲ್ಲಿ ಸುಮಾರು ೩೦ ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬಿಎಂಟಿಸಿ ಬಸ್ ರೋಸ್ ಗಾರ್ಡನ್ ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್ ನಲ್ಲಿ ಚಾಲಕ ಬಸ್ ಸ್ಟಾಪ್ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. ಎರಡರಿಂದ ಮೂರು ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ ಸ್ಟಾರ್ಟ್ ಆಗಲಿಲ್ಲ. ಈ ವೇಳೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಇಡೀ ಬಸ್ ಸುಟ್ಟು ಭಸ್ಮವಾಗಿದೆ . ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…