ರಾಜ್ಯ

ನೈಸ್ ರೋಡ್ ಟೋಲ್ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ

ಬೆಂಗಳೂರು :  ಜುಲೈ ೧ ರಿಂದ ನೈಸ್‌ ರಸ್ತೆಯ ಟೋಲ್‌ ದರ ಏರಿಕೆ ಮಾಡಿರುವ ಬೆನ್ನಲ್ಲೆ  ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಈ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಲಾಗುತ್ತಿದೆ. ಮಾದಾವರ ಟು ಎಲೆಕ್ಟ್ರಾನಿಕ್‌ ಸಿಟಿ ಮಾರ್ಗದ ಬಿಎಂಟಿಸಿ ಬಸ್‌ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಪ್ರತಿದಿನ ಮಾದಾವರದಿಂದ ಎಲೆಕ್ಟ್ರಾನಿಕ್‌ ಸಿಟಿಗೆ ೨೧ ಬಿಎಂಟಿಸಿ ಬಸ್‌ ಗಳು ೧೭೦ ಟ್ರಿಪ್‌ ಗಳಲ್ಲಿ ಓಡಿಸಲಾಗುತ್ತಿದ್ದು, ಪ್ರಸ್ತುತವಾಗಿ ಟಿಕೆಟ್‌ ದರ ೬೦ ರೂಪಾಯಿ ಇದೆ. ಇದರಲ್ಲಿ ಟೋಲ್‌ ದರ ೨೫ ರೂ ಸಹ ಸೇರಿದೆ. ಈ ಟೋಲ್‌ ದರ ಏರಿಕೆಯಿಂದ ೫ ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಬಿಎಂಟಿಸಿ ಬಸ್‌ ನೈಸ್‌ ರಸ್ತೆಯಲ್ಲಿ ಸಂಚರಿಸಲು ಒಂದು ಟ್ರಿಪ್‌ ಗೆ ೬೭೫ ರೂ ಟೋಲ್‌ ನೀಡಬೇಕಿತ್ತು. ಈಗ ಟೋಲ್‌ ದರ ಏರಿಕೆಯಾಗಿರುವುದರಿಂದ ಒಂದು ಬಸ್‌ ಟ್ರಿಪ್ ಗೆ ೭೮೫ ರೂ ಟೋಲ್‌ ಗೆ ನೀಡಲಾಗುತ್ತಿದೆ. ಅಂದರೆ ಪ್ರತಿ ಟ್ರಿಪ್ ಗೆ ೧೧೦ ರೂ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ನಾವು ಬಸ್‌ ದರವನ್ನು ಏರಿಕೆ ಮಾಡಿಲ್ಲ. ಆದರೆ ಟೋಲ್‌ ದರ ಏರಿಕೆಯಾಗಿರುವ ಹಿನ್ನಲೆ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಸ್‌ ದರ ಏರಿಕೆಯಾಗಿದೆ. ಎಲ್ಲಿ ಟೋಲ್‌ ಸಿಗುತ್ತೋ ಅಲ್ಲಿ ಬಸ್‌ ಸೀಟುಗಳನ್ನು ಡಿವೈಡ್‌ ಮಾಡುತ್ತೇವೆ. ಟೋಲ್‌ ರೇಟ್‌ ಎಷ್ಟು ಜಾಸ್ತಿ ಮಾಡಿದ್ದಾರೆ ಅದನ್ನ ಗ್ರಾಹಕರಿಂದ ಸಂಗ್ರಹಿಸುತ್ತೇವೆ. ಬಿಎಂಟಿಸಿ ಬಸ್‌ ಗಳಿಗೆ ರಿಯಾಯಿತಿ ನೀಡಿ ಅಂತಾ ಎಂಡಿಯಿಂದ ಎರಡು ಸಲ ಪತ್ರ ಬರೆದಿದ್ದಾರೆ. ಉತ್ತರ ಬಂದಿಲ್ಲ . ಹಾಗಾಗಿ ಇದು ಬಸ್‌ ದರ ಏರಿಕೆಯಲ್ಲ, ಟೋಲ್‌ ಸೇರಿಸುತ್ತಿದ್ದೇವೆ ಅಷ್ಟೇ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

53 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

1 hour ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

1 hour ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

2 hours ago