ರಾಜ್ಯ

ನೈಸ್ ರೋಡ್ ಟೋಲ್ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ

ಬೆಂಗಳೂರು :  ಜುಲೈ ೧ ರಿಂದ ನೈಸ್‌ ರಸ್ತೆಯ ಟೋಲ್‌ ದರ ಏರಿಕೆ ಮಾಡಿರುವ ಬೆನ್ನಲ್ಲೆ  ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಈ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಲಾಗುತ್ತಿದೆ. ಮಾದಾವರ ಟು ಎಲೆಕ್ಟ್ರಾನಿಕ್‌ ಸಿಟಿ ಮಾರ್ಗದ ಬಿಎಂಟಿಸಿ ಬಸ್‌ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಪ್ರತಿದಿನ ಮಾದಾವರದಿಂದ ಎಲೆಕ್ಟ್ರಾನಿಕ್‌ ಸಿಟಿಗೆ ೨೧ ಬಿಎಂಟಿಸಿ ಬಸ್‌ ಗಳು ೧೭೦ ಟ್ರಿಪ್‌ ಗಳಲ್ಲಿ ಓಡಿಸಲಾಗುತ್ತಿದ್ದು, ಪ್ರಸ್ತುತವಾಗಿ ಟಿಕೆಟ್‌ ದರ ೬೦ ರೂಪಾಯಿ ಇದೆ. ಇದರಲ್ಲಿ ಟೋಲ್‌ ದರ ೨೫ ರೂ ಸಹ ಸೇರಿದೆ. ಈ ಟೋಲ್‌ ದರ ಏರಿಕೆಯಿಂದ ೫ ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಬಿಎಂಟಿಸಿ ಬಸ್‌ ನೈಸ್‌ ರಸ್ತೆಯಲ್ಲಿ ಸಂಚರಿಸಲು ಒಂದು ಟ್ರಿಪ್‌ ಗೆ ೬೭೫ ರೂ ಟೋಲ್‌ ನೀಡಬೇಕಿತ್ತು. ಈಗ ಟೋಲ್‌ ದರ ಏರಿಕೆಯಾಗಿರುವುದರಿಂದ ಒಂದು ಬಸ್‌ ಟ್ರಿಪ್ ಗೆ ೭೮೫ ರೂ ಟೋಲ್‌ ಗೆ ನೀಡಲಾಗುತ್ತಿದೆ. ಅಂದರೆ ಪ್ರತಿ ಟ್ರಿಪ್ ಗೆ ೧೧೦ ರೂ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ನಾವು ಬಸ್‌ ದರವನ್ನು ಏರಿಕೆ ಮಾಡಿಲ್ಲ. ಆದರೆ ಟೋಲ್‌ ದರ ಏರಿಕೆಯಾಗಿರುವ ಹಿನ್ನಲೆ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಸ್‌ ದರ ಏರಿಕೆಯಾಗಿದೆ. ಎಲ್ಲಿ ಟೋಲ್‌ ಸಿಗುತ್ತೋ ಅಲ್ಲಿ ಬಸ್‌ ಸೀಟುಗಳನ್ನು ಡಿವೈಡ್‌ ಮಾಡುತ್ತೇವೆ. ಟೋಲ್‌ ರೇಟ್‌ ಎಷ್ಟು ಜಾಸ್ತಿ ಮಾಡಿದ್ದಾರೆ ಅದನ್ನ ಗ್ರಾಹಕರಿಂದ ಸಂಗ್ರಹಿಸುತ್ತೇವೆ. ಬಿಎಂಟಿಸಿ ಬಸ್‌ ಗಳಿಗೆ ರಿಯಾಯಿತಿ ನೀಡಿ ಅಂತಾ ಎಂಡಿಯಿಂದ ಎರಡು ಸಲ ಪತ್ರ ಬರೆದಿದ್ದಾರೆ. ಉತ್ತರ ಬಂದಿಲ್ಲ . ಹಾಗಾಗಿ ಇದು ಬಸ್‌ ದರ ಏರಿಕೆಯಲ್ಲ, ಟೋಲ್‌ ಸೇರಿಸುತ್ತಿದ್ದೇವೆ ಅಷ್ಟೇ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago