ರಾಜ್ಯ

ನೈಸ್ ರೋಡ್ ಟೋಲ್ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ

ಬೆಂಗಳೂರು :  ಜುಲೈ ೧ ರಿಂದ ನೈಸ್‌ ರಸ್ತೆಯ ಟೋಲ್‌ ದರ ಏರಿಕೆ ಮಾಡಿರುವ ಬೆನ್ನಲ್ಲೆ  ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಈ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಲಾಗುತ್ತಿದೆ. ಮಾದಾವರ ಟು ಎಲೆಕ್ಟ್ರಾನಿಕ್‌ ಸಿಟಿ ಮಾರ್ಗದ ಬಿಎಂಟಿಸಿ ಬಸ್‌ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಪ್ರತಿದಿನ ಮಾದಾವರದಿಂದ ಎಲೆಕ್ಟ್ರಾನಿಕ್‌ ಸಿಟಿಗೆ ೨೧ ಬಿಎಂಟಿಸಿ ಬಸ್‌ ಗಳು ೧೭೦ ಟ್ರಿಪ್‌ ಗಳಲ್ಲಿ ಓಡಿಸಲಾಗುತ್ತಿದ್ದು, ಪ್ರಸ್ತುತವಾಗಿ ಟಿಕೆಟ್‌ ದರ ೬೦ ರೂಪಾಯಿ ಇದೆ. ಇದರಲ್ಲಿ ಟೋಲ್‌ ದರ ೨೫ ರೂ ಸಹ ಸೇರಿದೆ. ಈ ಟೋಲ್‌ ದರ ಏರಿಕೆಯಿಂದ ೫ ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಬಿಎಂಟಿಸಿ ಬಸ್‌ ನೈಸ್‌ ರಸ್ತೆಯಲ್ಲಿ ಸಂಚರಿಸಲು ಒಂದು ಟ್ರಿಪ್‌ ಗೆ ೬೭೫ ರೂ ಟೋಲ್‌ ನೀಡಬೇಕಿತ್ತು. ಈಗ ಟೋಲ್‌ ದರ ಏರಿಕೆಯಾಗಿರುವುದರಿಂದ ಒಂದು ಬಸ್‌ ಟ್ರಿಪ್ ಗೆ ೭೮೫ ರೂ ಟೋಲ್‌ ಗೆ ನೀಡಲಾಗುತ್ತಿದೆ. ಅಂದರೆ ಪ್ರತಿ ಟ್ರಿಪ್ ಗೆ ೧೧೦ ರೂ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ನಾವು ಬಸ್‌ ದರವನ್ನು ಏರಿಕೆ ಮಾಡಿಲ್ಲ. ಆದರೆ ಟೋಲ್‌ ದರ ಏರಿಕೆಯಾಗಿರುವ ಹಿನ್ನಲೆ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಸ್‌ ದರ ಏರಿಕೆಯಾಗಿದೆ. ಎಲ್ಲಿ ಟೋಲ್‌ ಸಿಗುತ್ತೋ ಅಲ್ಲಿ ಬಸ್‌ ಸೀಟುಗಳನ್ನು ಡಿವೈಡ್‌ ಮಾಡುತ್ತೇವೆ. ಟೋಲ್‌ ರೇಟ್‌ ಎಷ್ಟು ಜಾಸ್ತಿ ಮಾಡಿದ್ದಾರೆ ಅದನ್ನ ಗ್ರಾಹಕರಿಂದ ಸಂಗ್ರಹಿಸುತ್ತೇವೆ. ಬಿಎಂಟಿಸಿ ಬಸ್‌ ಗಳಿಗೆ ರಿಯಾಯಿತಿ ನೀಡಿ ಅಂತಾ ಎಂಡಿಯಿಂದ ಎರಡು ಸಲ ಪತ್ರ ಬರೆದಿದ್ದಾರೆ. ಉತ್ತರ ಬಂದಿಲ್ಲ . ಹಾಗಾಗಿ ಇದು ಬಸ್‌ ದರ ಏರಿಕೆಯಲ್ಲ, ಟೋಲ್‌ ಸೇರಿಸುತ್ತಿದ್ದೇವೆ ಅಷ್ಟೇ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago