ರಾಜ್ಯ

ನೈಸ್ ರೋಡ್ ಟೋಲ್ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ

ಬೆಂಗಳೂರು :  ಜುಲೈ ೧ ರಿಂದ ನೈಸ್‌ ರಸ್ತೆಯ ಟೋಲ್‌ ದರ ಏರಿಕೆ ಮಾಡಿರುವ ಬೆನ್ನಲ್ಲೆ  ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಈ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಲಾಗುತ್ತಿದೆ. ಮಾದಾವರ ಟು ಎಲೆಕ್ಟ್ರಾನಿಕ್‌ ಸಿಟಿ ಮಾರ್ಗದ ಬಿಎಂಟಿಸಿ ಬಸ್‌ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಪ್ರತಿದಿನ ಮಾದಾವರದಿಂದ ಎಲೆಕ್ಟ್ರಾನಿಕ್‌ ಸಿಟಿಗೆ ೨೧ ಬಿಎಂಟಿಸಿ ಬಸ್‌ ಗಳು ೧೭೦ ಟ್ರಿಪ್‌ ಗಳಲ್ಲಿ ಓಡಿಸಲಾಗುತ್ತಿದ್ದು, ಪ್ರಸ್ತುತವಾಗಿ ಟಿಕೆಟ್‌ ದರ ೬೦ ರೂಪಾಯಿ ಇದೆ. ಇದರಲ್ಲಿ ಟೋಲ್‌ ದರ ೨೫ ರೂ ಸಹ ಸೇರಿದೆ. ಈ ಟೋಲ್‌ ದರ ಏರಿಕೆಯಿಂದ ೫ ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಬಿಎಂಟಿಸಿ ಬಸ್‌ ನೈಸ್‌ ರಸ್ತೆಯಲ್ಲಿ ಸಂಚರಿಸಲು ಒಂದು ಟ್ರಿಪ್‌ ಗೆ ೬೭೫ ರೂ ಟೋಲ್‌ ನೀಡಬೇಕಿತ್ತು. ಈಗ ಟೋಲ್‌ ದರ ಏರಿಕೆಯಾಗಿರುವುದರಿಂದ ಒಂದು ಬಸ್‌ ಟ್ರಿಪ್ ಗೆ ೭೮೫ ರೂ ಟೋಲ್‌ ಗೆ ನೀಡಲಾಗುತ್ತಿದೆ. ಅಂದರೆ ಪ್ರತಿ ಟ್ರಿಪ್ ಗೆ ೧೧೦ ರೂ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ನಾವು ಬಸ್‌ ದರವನ್ನು ಏರಿಕೆ ಮಾಡಿಲ್ಲ. ಆದರೆ ಟೋಲ್‌ ದರ ಏರಿಕೆಯಾಗಿರುವ ಹಿನ್ನಲೆ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಸ್‌ ದರ ಏರಿಕೆಯಾಗಿದೆ. ಎಲ್ಲಿ ಟೋಲ್‌ ಸಿಗುತ್ತೋ ಅಲ್ಲಿ ಬಸ್‌ ಸೀಟುಗಳನ್ನು ಡಿವೈಡ್‌ ಮಾಡುತ್ತೇವೆ. ಟೋಲ್‌ ರೇಟ್‌ ಎಷ್ಟು ಜಾಸ್ತಿ ಮಾಡಿದ್ದಾರೆ ಅದನ್ನ ಗ್ರಾಹಕರಿಂದ ಸಂಗ್ರಹಿಸುತ್ತೇವೆ. ಬಿಎಂಟಿಸಿ ಬಸ್‌ ಗಳಿಗೆ ರಿಯಾಯಿತಿ ನೀಡಿ ಅಂತಾ ಎಂಡಿಯಿಂದ ಎರಡು ಸಲ ಪತ್ರ ಬರೆದಿದ್ದಾರೆ. ಉತ್ತರ ಬಂದಿಲ್ಲ . ಹಾಗಾಗಿ ಇದು ಬಸ್‌ ದರ ಏರಿಕೆಯಲ್ಲ, ಟೋಲ್‌ ಸೇರಿಸುತ್ತಿದ್ದೇವೆ ಅಷ್ಟೇ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

4 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

4 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

4 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

4 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

4 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

4 hours ago