ಕಾಂಗ್ರೆಸ್ ನಿಗಮ ಮಂಡಳಿ ಇನ್ನೂ ಸಹ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈ ಕುರಿತಾಗಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ಸಹ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.
ನಿಗಮ ಮಂಡಳಿ ನೇಮಕಾತಿ ಕುರಿತಾಗಿ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್ ಮಂಡಳಿ ಮತ್ತು ನಿಗಮಗಳ ಅಧ್ಯಕ್ಷರ ನೇಮಕಕ್ಕೂ ಮುನ್ನ ತನ್ನ ಸಲಹೆ ಕೇಳಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ನಿಗಮ ಮಂಡಳಿ ವಿಚಾರವಾಗಿ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನವಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿತ್ತು.
ಸದ್ಯ ಈ ವಿಚಾರವಾಗಿ ಮಾಧ್ಯಮದವರ ಜತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರ ಸಲಹೆಗಗೆ ಕಿವಿ ಕೊಡುವುದು ಕಷ್ಟ, ಅವರ ಜತೆ ಮಾತನಾಡಿದ್ದೇನೆ ಎಂದು ಹೇಳಿಕೆಯನ್ನು ನೀಡಿದರು. ನಿಗಮ ಮಂಡಳಿ ನೇಮಕಾತಿ ಬಗ್ಗೆ ನಾನು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಚರ್ಚೆ ನಡೆಸಿ ಬಳಿಕ ಹೈಕಮಾಂಡ್ ಅನುಮೋದನೆಗಾಗಿ ಪಟ್ಟಿಯನ್ನು ಸುರ್ಜೇವಾಲಾ ಅವರಿಗೆ ನೀಡಲಾಗಿದೆ, ಪಟ್ಟಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಸಹಿ ಆಗಬೇಕಿದೆ ಎಂದೂ ಸಹ ಸಿದ್ದರಾಮಯ್ಯ ತಿಳಿಸಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…