ಬೆಂಗಳೂರು: ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.
ಬೆದರಿಕೆ ಮೇಲ್ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದರೆ.
ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್ ಸಿಬ್ಬಂಧಿ ಹಾಗೂ ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…