ರಾಜ್ಯ

ಶಾಲೆಗಳಿಗೆ ಬಾಂಬ್‌ ಬೆದರಿಕೆ : ಸ್ಥಳ ಪರಿಶೀಲನೆ ನಡೆಸಿದ ಡಿಕೆಶಿ

ಬೆಂಗಳೂರು : ನಗರದ 15 ಕ್ಕೂ ಹೆಚ್ಚು ಶಾಲೆಗಳಿಗೆ ಬೆಳ್ಳಂ ಬೆಳಗ್ಗೆ ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಡಿಸಿಎಂ ಡಿಕೆಶಿ ನಿವಸದ ಬಳಿ ಇರುವ ಶಾಲೆಗೂ ಕೂಡ ಬೆದರಿಕೆ ಕೇಳಿಬಂದಿತ್ತು. ಇದೀಗ ಡಿಕೆಶಿ ಶಾಲೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಕೆಶಿ ಟಿವಿಯಲ್ಲಿ ವಿಷಯ ತಿಳಿದು ಗಾಬರಿಯಾದೆ. ನೀವ್ ಬೇಬಿ ಸಿಟ್ಟಿಂಗ್‌ ಗೆ ಬಾಂಬ್‌ ಬೆದರಿಕೆ ಬಂದಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಎಂಬುದು ತಿಳಿದು ಬಂದಿದೆ. 8-10 ಸಲ ಹುಸಿ ಕರೆ ಮಾಡುತ್ತಾರೆ. ಯಾವಾಗಲಾದರೂ ನಿಜವಾಗಿಯೂ ಬಾಂಬ್‌ ಇಡಬಹುದು ಯಾವುದನ್ನೂ ಕಡೆಗಣಿಸಬಾರದು ಎಂದಿದ್ದಾರೆ.‌

ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿತ್ತು ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್‌ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದರು.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.

ಬೆದರಿಕೆ ಮೇಲ್‌ ಬಗ್ಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್‌ ಸಿಬ್ಬಂಧಿ ಹಾಗೂ ಬಾಂಬ್‌ ಸ್ಕ್ವಾಡ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

2 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

2 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

3 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

3 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

3 hours ago