ರಾಜ್ಯ

ನಟ ಧ್ರುವಸರ್ಜಾಗೆ ಬಿಗ್‌ ರಿಲೀಫ್‌ ಕೊಟ್ಟ ಬಾಂಬೆ ಹೈಕೋರ್ಟ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಚಾರ್ಜ್‌ಶೀಟ್‌ ಸಲ್ಲಿಸದಂತೆ ಬಾಂಬೆ ಹೈಕೋರ್ಟ್‌ ಪೊಲೀಸರಿಗೆ ನಿರ್ದೇಶನ ನೀಡಿದೆ.

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್‌ ಠಾಣೆಯಲ್ಲಿ ಧ್ರುವ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದ ಧ್ರುವಸರ್ಜಾ ಮ್ಯಾನೇಜರ್‌, ಇದೊಂದು ಸುಳ್ಳು ಆರೋಪ ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಧ್ರುವಸರ್ಜಾ ಮ್ಯಾನೇಜರ್‌ ಅಶ್ವಿನ್‌, ಧ್ರುವ ಸರ್ಜಾ ವಿರುದ್ಧ ಮೂರು ಕೋಟಿ ವಂಚನೆ ಆರೋಪ ಸುಳ್ಳು. ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ನಾವು ಸಿನಿಮಾ ಮಾಡಲು ರೆಡಿ ಇದ್ದೆವು. ಆದರೇ ಅವರೇ ವಿಳಂಬ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

2018ರಲ್ಲಿ ಸೋಲ್ಜರ್‌ ಸಿನಿಮಾ ಮಾಡಲು 3.15 ಕೋಟಿ ರೂ ಹಣ ನೀಡಿದ್ದರು. ಪ್ರತಿ ಬಾರಿ ನಾವು ಕರೆ ಮಾಡಿ ಕೇಳಿದಾಗಲೂ ಅವರು ಬ್ಯುಸಿ ಇರುವುದಾಗಿ ಹೇಳುತ್ತಲೇ ಬಂದಿದ್ದಾರೆ.

ನಾಲ್ಕುವರೆ ವರ್ಷದ ಬಳಿಕ ಸಿನಿಮಾ ಸ್ಕ್ರಿಪ್ಟ್‌ ಮೊದಲಾರ್ಧವನ್ನು ಕಳುಹಿಸಿದರು. ಒಂದು ದಿನ ಸೋಲ್ಜರ್‌ ಸಿನಿಮಾ ಮಾಡುವುದಾದರೆ ಕನ್ನಡದಲ್ಲಿ ಬೇಡ. ತೆಲುಗು ಅಥವಾ ಹಿಂದಿಯಲ್ಲಿ ಮಾಡೋಣ ಎಂದು ಹೇಳಿದ್ದರು. ಇದಕ್ಕೆ ಧ್ರುವ ಸರ್ಜಾ ಒಪ್ಪಲಿಲ್ಲ. ಸಿನಿಮಾವನ್ನು ಕನ್ನಡದಲ್ಲೇ ಮಾಡೋಣ ಎಂದು ಹೇಳಿದ್ದರು.

ಕೊನೆಗೆ ಕನ್ನಡದಲ್ಲಿ ಸಿನಿಮಾ ಮಾಡೋಣ ಎಂದು ತೀರ್ಮಾನವಾಯಿತು. ಆಗಿದ್ದರೂ ನಾವು ಪ್ರತಿ ಬಾರಿ ಕರೆ ಮಾಡಿ ನಾವು ರೆಡಿ ಇದ್ದೇವೆ ಎಂದು ಹೇಳುತ್ತಲೇ ಇದ್ದೆವು. ಅವರೇ ವಿಳಂಬ ಮಾಡುತ್ತಿದ್ದರು. ನಮ್ಮ ಬಳಿ ಒಂದು ಮಾತು. ಅಲ್ಲಿ ಇನ್ನೊಂದು ರೀತಿ ಹೇಳುತ್ತಿದ್ದರು. ಬಳಿಕ ಕರೆ ಮಾಡಿದರೆ ಕೋರ್ಟ್‌ಗೆ ಹೋಗಿದ್ದಾರೆ ಎಲ್ಲವೂ ಕೋರ್ಟ್‌ನಲ್ಲೇ ಇತ್ಯರ್ಥವಾಗಲಿದೆ ಎಂದರು ಎಂದು ಮ್ಯಾನೇಜರ್‌ ಅಶ್ವಿನ್ ಮಾಹಿತಿ ನೀಡಿದರು.

ಈ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್‌ ಚಾರ್ಜ್‌ಶೀಟ್‌ ಸಲ್ಲಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಧ್ರುವಸರ್ಜಾಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

4 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

5 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

5 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

6 hours ago