ರಾಜ್ಯ

ನಟ ಧ್ರುವಸರ್ಜಾಗೆ ಬಿಗ್‌ ರಿಲೀಫ್‌ ಕೊಟ್ಟ ಬಾಂಬೆ ಹೈಕೋರ್ಟ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಚಾರ್ಜ್‌ಶೀಟ್‌ ಸಲ್ಲಿಸದಂತೆ ಬಾಂಬೆ ಹೈಕೋರ್ಟ್‌ ಪೊಲೀಸರಿಗೆ ನಿರ್ದೇಶನ ನೀಡಿದೆ.

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್‌ ಠಾಣೆಯಲ್ಲಿ ಧ್ರುವ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದ ಧ್ರುವಸರ್ಜಾ ಮ್ಯಾನೇಜರ್‌, ಇದೊಂದು ಸುಳ್ಳು ಆರೋಪ ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಧ್ರುವಸರ್ಜಾ ಮ್ಯಾನೇಜರ್‌ ಅಶ್ವಿನ್‌, ಧ್ರುವ ಸರ್ಜಾ ವಿರುದ್ಧ ಮೂರು ಕೋಟಿ ವಂಚನೆ ಆರೋಪ ಸುಳ್ಳು. ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ನಾವು ಸಿನಿಮಾ ಮಾಡಲು ರೆಡಿ ಇದ್ದೆವು. ಆದರೇ ಅವರೇ ವಿಳಂಬ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

2018ರಲ್ಲಿ ಸೋಲ್ಜರ್‌ ಸಿನಿಮಾ ಮಾಡಲು 3.15 ಕೋಟಿ ರೂ ಹಣ ನೀಡಿದ್ದರು. ಪ್ರತಿ ಬಾರಿ ನಾವು ಕರೆ ಮಾಡಿ ಕೇಳಿದಾಗಲೂ ಅವರು ಬ್ಯುಸಿ ಇರುವುದಾಗಿ ಹೇಳುತ್ತಲೇ ಬಂದಿದ್ದಾರೆ.

ನಾಲ್ಕುವರೆ ವರ್ಷದ ಬಳಿಕ ಸಿನಿಮಾ ಸ್ಕ್ರಿಪ್ಟ್‌ ಮೊದಲಾರ್ಧವನ್ನು ಕಳುಹಿಸಿದರು. ಒಂದು ದಿನ ಸೋಲ್ಜರ್‌ ಸಿನಿಮಾ ಮಾಡುವುದಾದರೆ ಕನ್ನಡದಲ್ಲಿ ಬೇಡ. ತೆಲುಗು ಅಥವಾ ಹಿಂದಿಯಲ್ಲಿ ಮಾಡೋಣ ಎಂದು ಹೇಳಿದ್ದರು. ಇದಕ್ಕೆ ಧ್ರುವ ಸರ್ಜಾ ಒಪ್ಪಲಿಲ್ಲ. ಸಿನಿಮಾವನ್ನು ಕನ್ನಡದಲ್ಲೇ ಮಾಡೋಣ ಎಂದು ಹೇಳಿದ್ದರು.

ಕೊನೆಗೆ ಕನ್ನಡದಲ್ಲಿ ಸಿನಿಮಾ ಮಾಡೋಣ ಎಂದು ತೀರ್ಮಾನವಾಯಿತು. ಆಗಿದ್ದರೂ ನಾವು ಪ್ರತಿ ಬಾರಿ ಕರೆ ಮಾಡಿ ನಾವು ರೆಡಿ ಇದ್ದೇವೆ ಎಂದು ಹೇಳುತ್ತಲೇ ಇದ್ದೆವು. ಅವರೇ ವಿಳಂಬ ಮಾಡುತ್ತಿದ್ದರು. ನಮ್ಮ ಬಳಿ ಒಂದು ಮಾತು. ಅಲ್ಲಿ ಇನ್ನೊಂದು ರೀತಿ ಹೇಳುತ್ತಿದ್ದರು. ಬಳಿಕ ಕರೆ ಮಾಡಿದರೆ ಕೋರ್ಟ್‌ಗೆ ಹೋಗಿದ್ದಾರೆ ಎಲ್ಲವೂ ಕೋರ್ಟ್‌ನಲ್ಲೇ ಇತ್ಯರ್ಥವಾಗಲಿದೆ ಎಂದರು ಎಂದು ಮ್ಯಾನೇಜರ್‌ ಅಶ್ವಿನ್ ಮಾಹಿತಿ ನೀಡಿದರು.

ಈ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್‌ ಚಾರ್ಜ್‌ಶೀಟ್‌ ಸಲ್ಲಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಧ್ರುವಸರ್ಜಾಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

6 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

7 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

8 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

8 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

8 hours ago