ರಾಜ್ಯ

‘ಬೊಮ್ಮಾಯಿ’ ನೇತೃತ್ವದ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದೆ : ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ: ಎಂ.ಬಿ.ಪಾಟೀಲ್‌

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಶುಕ್ರವಾರ ತಿರುಗೇಟು ನೀಡಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ ಎಂದರು.
ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ ಎಂದು ಟೀಕಾಸ್ತ್ರ ಪ್ರಯೋಗಿಸಿದರು.
ಪ್ರತ್ಯೇಕ ರಾಷ್ಟ್ರ ದ ಬಗ್ಗೆ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ದಕ್ಷಿಣದ ರಾಜ್ಯಗಳಿಗೆ ಆದಾಯಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಾಗೆ ಹೇಳಿದ್ದಾರೆ  ಅದಕ್ಕೆ ಹೆಚ್ಚಿನ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡರು.
ನಿನ್ನೆ ಮುಖ್ಯಮಂತ್ರಿ ಅವರು ಡಿನ್ನರ್ ಪಾರ್ಟಿ ಕರೆದ ಸಂದರ್ಭದಲ್ಲಿ, ಜಿಲ್ಲೆಗಳ ಉಸ್ತುವಾರಿ ಸಚಿವರೊಂದಿಗೆ ಬರಲಿರುವ ಲೋಕಸಭಾ ಚುನಾವಣೆಗೆ ಸಜ್ಜಾಗುವುದು, ಪಕ್ಷ ಸಂಘಟನೆ ಮತ್ತಿತರ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ ಎಂದು ಪಾಟೀಲ ತಿಳಿಸಿದರು.
andolanait

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

3 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

3 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

3 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

13 hours ago