ರಾಜ್ಯ

ಪುಸ್ತಕ ಬಹುಮಾನ: ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ

ಮೈಸೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಪ್ರಕಟಿಸಿರುವ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್‌ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅಥವಾ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ಬೆಂಗಳೂರಿನ ಕನ್ನಡ ಭವನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟಾರ್ ಕಚೇರಿಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಜುಲೈ 25 ರೊಳಗೆ ಕಳುಹಿಸುವುದು. ಅರ್ಜಿಗಳನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ಹಾಗೂ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ದೂ.ಸಂ:080-22113146 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಡಿ.ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago