ರಾಜ್ಯ

ಬೂಕರ್‌ ವಿಜೇತೆ ಬಾನು ಮುಷ್ತಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ : ಸಿಎಂ ಅಧಿಕೃತ ಘೋಷಣೆ

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು, ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್, ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಮೈಸೂರು ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಲೇಖಕಿ ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡಕ್ಕೆ ಬೂಕರ್‌ ತಂದುಕೊಟ್ಟ ಮೊದಲ ಸಾಹಿತಿ ಬಾನು
ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಸಿರಿಗನ್ನಡದ ಸಾಹಿತ್ಯಕ್ಕೆ ದೊರೆತ ಮೊದಲ ಪ್ರಶಸ್ತಿ ಇದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಮನ್ನಣೆ ಸಿಕ್ಕಂತಾಗಿದೆ.

ಇನ್ನು ಕನ್ನಡ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆ ಅಪಾರ. ಹೀಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ದಕ್ಕಿವೆ. ಕುಬ, ಬಡವರ ಮಗಳು ಹೆಣ್ಣಲ್ಲ ಕಾದಂಬರಿ, ಹೆಜ್ಜೆ ಮೂಡಿದ ಹಾದಿ, ಬೆಂಕಿಮಳೆ, ಎದೆಯ ಹಣತೆ ಅವರು ಬರೆದ ಕಥಾಸಂಕಲನವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago